ಕುಂದಾಪುರ

ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮ,ಪ್ರತಿಭಟನೆ ಕೈಬಿಟ್ಟ ಪೋಷಕರು

Share

Advertisement
Advertisement
Advertisement

Advertisement

ಕುಂದಾಪುರ:ಕನ್ನಡ ಶಿಕ್ಷಕರನ್ನು ಹೆಚ್ಚುವರಿ ಆಧಾರದ ಮೇಲೆ ವರ್ಗಾವಣೆ ಮಾಡಿರುವುದದನ್ನು ಖಂಡಿಸಿ ಕಳೆದ ಐದು ದಿನಗಳಿಂದ ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆಯಲ್ಲಿ ನಡೆಯುತ್ತಿದ್ದ ಮಕ್ಕಳ ಪೋಷಕರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಡುಕೋಣೆ ಶಾಲೆಯಲ್ಲಿ ಬುಧುವಾರ ವಿಶೇಷ ಸಭೆ ನಡೆಯಿತು.

ಡಿಡಿಪಿಐ ಗಣಪತಿ.ಕೆ ಪೋಷಕರ ಸಭೆಯನ್ನುದ್ದೇಶಿಸಿ ಮಾತನಾಡಿ ಸರಕಾರದ ನಿಯಮದ ಪ್ರಕಾರ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ,
ಪರ್ಯಾಯವಾಗಿ ಅತಿಥಿ ಶಿಕ್ಷಕರೊಬ್ಬರನ್ನು ನೇಮಕ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಹೇಳಿದರು.ಪೋಷಕರ ಬೇಡಿಕೆಗಳನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿ.ಒ ಮಂಜುನಾಥ್,ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಜ್ಯೋತಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್,ಉಪಾಧ್ಯಕ್ಷ ವಿಶ್ವನಾಥ್ ಪಡುಕೋಣೆ,ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಪಂಚಾಯತ್ ಸದಸ್ಯರಾದ ಸುಧಾಕರ ಶೆಟ್ಟಿ,ರಾಜೀವ ಪಡುಕೋಣೆ,ಸ್ಥಳೀಯರಾದ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು.
ಶಿಕ್ಷಕರ ನೇಮಕಾತಿ ಬೇಡಿಕೆಗೆ ಶಿಕ್ಷಣ ಇಲಾಖೆ ಸ್ಪಂದಿಸಿದ ಕಾರಣ ಕಳೆದ ಐದು ದಿನಗಳಿಂದ ಪಡುಕೋಣೆ ಶಾಲೆಯಲ್ಲಿ ನಡೆಯುತ್ತಿದ್ದ ಪೋಷಕರ ಪ್ರತಿಭಟನೆ ಬುಧವಾರ ಮುಕ್ತಾಯಗೊಂಡಿದೆ.ಮಕ್ಕಳು ತರಗತಿಗೆ ಹಾಜರಾಗಿ ಪಾಠ ಪ್ರವಚನಗಳಲ್ಲಿ ತೊಡಗಿಕೊಂಡರು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago