ಕುಂದಾಪುರ:ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು,ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಬೈಂದೂರು,ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೈಂದೂರು ವತಿಯಿಂದ ಎಸ್ಎಸ್ಎಲ್ಸಿ ಫಲಿತಾಂಶ-2023 ಸಂಭ್ರಮ ಮತ್ತು ಪ್ರತಿಭಾನಿತ್ವ ವಿದ್ಯಾರ್ಥಿಗಳಿಗೆ ಸನ್ಮಾನ ಅಭಿನಂದನಾ ಕಾರ್ಯಕ್ರಮ ಶ್ರೀಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ನಡೆಯಿತು.
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಶಿಕ್ಷಕರು ಮಕ್ಕಳಿಗೆ ಸ್ಫೂರ್ತಿದಾಯಕರಾದರೆ ಮಾತ್ರ ಹೆಚ್ಚಿನ ರೀತಿಯಲ್ಲಿ ಮಕ್ಕಳು ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು.
ಕೊಲ್ಲೂರು ದೇವಳದ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ,ವಿದ್ಯಾಂಗ ಉಪ ನಿರ್ದೇಶಕ ಗಣಪತಿ.ಕೆ,ಕ್ಷೇತ್ರ ಶಿಕ್ಷಣಾಧಿಕಾರಿ ಕುಂದಾಪುರ ಕಾಂತರಾಜು,ಬೈಂದೂರು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಅನುದಾನಿತ ಪ್ರೌಢಶಾಲಾ ಶಿಕ್ಷಕರ ಸಂಘ ಬೈಂದೂರು ಅಧ್ಯಕ್ಷ ಆನಂದ ಮುದ್ದೋಡಿ,ಹಿಂದೂ ಅಭ್ಯುದಯ ಸಂಘ ನಾವುಂದ ಅಧ್ಯಕ್ಷ ಶಶಿಧರ ಶೆಟ್ಟಿ,ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಬೈಂದೂರು ಎಂಜಿ ಮಂಜುನಾಥ,ಬಿಆರ್ಪಿ ಸುಧಾಕರ ದೇವಾಡಿಗ,ವೆಂಕಟೇಶ್ ಶಾಸ್ತ್ರಿ ಉಪಸ್ಥಿತರಿದ್ದರು.ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಶಾಲೆಗಳನ್ನು ಹಾಗೂ 9 ಶಾಲೆಗಳ ಮುಖ್ಯೋಪಾಧ್ಯಾಯರನ್ನು,ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ನೋಡಲ್ ಅಧಿಕಾರಿ ಕರುಣಾಕರ್ ಶೆಟ್ಟಿ ಸ್ವಾಗತಿಸಿದರು.ಶಿಕ್ಷಕ ಶಿವರಾಮ ಮಧ್ಯಸ್ಥ ನಿರೂಪಿಸಿದರು.ಬಿಆರ್ಪಿ ಮಂಜುನಾಥ್ ನಾಯಕ್ ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…