ಕುಂದಾಪುರ:ವಿಶ್ವ ವೈದ್ಯರ ದಿನಾಚರಣೆಯ ಅಂಗವಾಗಿ ಸಿದ್ಧಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ರಾಜೇಂದ್ರ ಬೆಚ್ಚಳ್ಳಿಯವರು,ಸಿದ್ಧಾಪುರದಲ್ಲಿ ಕಳೆದ ಎರಡುವರೆ ದಶಕಗಳಿಂದ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ಜಗದೀಶ್ ಶೆಟ್ಟಿ ಹಾಗೂ ಸಿದ್ಧಾಪುರ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ದೀಕ್ಷಾ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.
ವಿಶ್ರಾಂತ ಉಪನ್ಯಾಸಕರಾದ ಡಾ. ಶ್ರೀಕಾಂತ್ ರಾವ್ ಮಾತನಾಡಿ,ವೈದ್ಯೋ ನಾರಾಯಣ ಹರಿ ಎಂಬಂತೆ ದೇವರು ಕೊಡುವುದು ಜನ್ಮ,ವೈದ್ಯರು ನೀಡುವುದು ಮರುಜನ್ಮ.ರೋಗಿಗಳ ಕಣ್ಣಿಗೆ ವೈದ್ಯರು ದೇವರ ರೂಪದಲ್ಲಿ ಕಾಣುತ್ತಾರೆ ರೋಗಿಯ ಆತ್ಮಸ್ಥೈರ್ಯ ದಿಂದ ಮಾನಸಿಕವಾಗಿ ಸದೃಢರಾಗಿ ಆಯುಷ್ಯ ವ್ರದ್ದಿಯಾಗುತ್ತದೆ ಎಂದರು.
ಉದ್ಯಮಿಗಳಾದ ಶ್ರೀಕಾಂತ್ ನಾಯಕ್,ಎಸ್.ಪಾಂಡುರಂಗ ಪೈ,ಟಿ.ಜಿ.ಪಾಂಡುರಂಗ ಪೈ, ಭೋಜರಾಜ್ ಶೆಟ್ಟಿ,ಆರೋಗ್ಯ ಕೇಂದ್ರದ ಕಿರಣ್ ಶೆಟ್ಟಿ,ಶಿಕ್ಷಕ ಪ್ರತಾಪ್ ಕಿಣಿ,ರಾಜೇಂದ್ರ ಬೆಚ್ಚಳ್ಳಿ ಉಪಸ್ಥಿತರಿದ್ದರು. ಆರೋಗ್ಯ ಕಾರ್ಯಕರ್ತರು ಸಿಬ್ಬಂದಿ,ಆಂಗನವಾಡಿ ಶಿಕ್ಷಕರು ಆಶಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…