ಕುಂದಾಪುರ:ಮೀನುಗಾರರ ಸಮಸ್ಯೆಗಳು ಹಂತ- ಹಂತಗಳಲ್ಲಿ ಬಗೆಹರಿಸುವ ಇಚ್ಛಾಶಕ್ತಿ ನಮ್ಮ ಸರಕಾರಕ್ಕಿದೆ ಎಂದು ಬಂದರು,ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.
ಭಾನುವಾರ ಕೋಡಿಕನ್ಯಾಣ ಮೀನುಗಾರಿಕೆ ಬಂದರು ಪ್ರದೇಶದಕ್ಕೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಕಡಲ್ಕೊರೆತ ಸಮಸ್ಯೆ ಕಾಸರಗೋಡಿನಿಂದ ಕಾರವಾರ- ಗೋವಾದ ತನಕ ಹಬ್ಬಿದೆ. ಇದಕ್ಕೆ ತಾತ್ಕಾಲಿಕ ಪರಿಹಾರ ಸಮಂಜಸವಲ್ಲ.ಹೀಗಾಗಿ ತಜ್ಞರ ಸಮಿತಿಯನ್ನು ನೇಮಿಸಿದ್ದು ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಲಾಗುತ್ತಿದೆ,ತಾತ್ಕಾಲಿಕ ಪರಿಹಾರ ಬೇಕಾದಲ್ಲಿ ವಿಮರ್ಶೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು.
ಕೋಡಿ ಕನ್ಯಾಣ,ಹಂಗಾರಕಟ್ಟೆ, ಬೆಂಗ್ರೆ ಮೀನುಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇವರ ದುಃಸ್ಥಿತಿ ನೋಡಿ ನನಗೆ ದುಃಖವಾಗಿದೆ.ಹೀಗಾಗಿ ಹೂಳೆತ್ತುವುದು ಮುಂತಾದ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಮೀನುಗಾರಿಕೆ,ಬಂದರು ಇಲಾಖೆ ಜಂಟಿಯಾಗಿ ಯೋಜನೆ ರೂಪಿಸಲಾಗುವುದು ಎಂದರು.
ಬಂದರು,ಮೀನುಗಾರಿಕೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರಕಾರದ ಅನುದಾನ ಸಾಕಾಗುವುದಿಲ್ಲ.ಹೀಗಾಗಿ ಕೇಂದ್ರ ಸರಕಾರದಲ್ಲಿ ಅನುದಾನಕ್ಕೆ ಬೇಡಿಕೆ ಇಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ,ಮೊಗವೀರ ಮುಖಂಡ ಡಾ.ಜಿ.ಶಂಕರ್, ಆನಂದ ಸಿ.ಕುಂದರ್, ಮೀನುಗಾರಿಕೆ,ಬಂದರು ಇಲಾಖೆ ಅಧಿಕಾರಿ ಕ್ಯಾ.ಸ್ವಾಮಿ, ಅಂಜನಾ ದೇವಿ,ಶ್ರೀನಿವಾಸ ಮೂರ್ತಿ, ಡಯಾಸ್,ಹಂಗಾರಕಟ್ಟೆ ಬಂದರು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಂದ್ರ ಸುವರ್ಣ, ಕೋಡಿ ಕನ್ಯಾಣ ಲಕ್ಷ್ಮಣ ಸುವರ್ಣ ಉಪಸ್ಥಿತರಿದ್ದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…