ಕುಂದಾಪುರ

ಕೋಡಿ ಕನ್ಯಾಣ,ಹಂಗಾರಕಟ್ಟೆ ಬಂದರಿಗೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಭೇಟಿ: ಮೀನುಗಾರರ ಸಮಸ್ಯೆಗಳಿಗೆ ಸ್ಪಂದನೆ

Share

ಕುಂದಾಪುರ:ಮೀನುಗಾರರ ಸಮಸ್ಯೆಗಳು ಹಂತ- ಹಂತಗಳಲ್ಲಿ ಬಗೆಹರಿಸುವ ಇಚ್ಛಾಶಕ್ತಿ ನಮ್ಮ ಸರಕಾರಕ್ಕಿದೆ ಎಂದು ಬಂದರು,ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.
ಭಾನುವಾರ ಕೋಡಿಕನ್ಯಾಣ ಮೀನುಗಾರಿಕೆ ಬಂದರು ಪ್ರದೇಶದಕ್ಕೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಕಡಲ್ಕೊರೆತ ಸಮಸ್ಯೆ ಕಾಸರಗೋಡಿನಿಂದ ಕಾರವಾರ- ಗೋವಾದ ತನಕ ಹಬ್ಬಿದೆ. ಇದಕ್ಕೆ ತಾತ್ಕಾಲಿಕ ಪರಿಹಾರ ಸಮಂಜಸವಲ್ಲ.ಹೀಗಾಗಿ ತಜ್ಞರ ಸಮಿತಿಯನ್ನು ನೇಮಿಸಿದ್ದು ಶಾಶ್ವತ ಪರಿಹಾರಕ್ಕೆ ಯೋಜನೆ ರೂಪಿಸಲಾಗುತ್ತಿದೆ,ತಾತ್ಕಾಲಿಕ ಪರಿಹಾರ ಬೇಕಾದಲ್ಲಿ ವಿಮರ್ಶೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು.
ಕೋಡಿ ಕನ್ಯಾಣ,ಹಂಗಾರಕಟ್ಟೆ, ಬೆಂಗ್ರೆ ಮೀನುಗಾರರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇವರ ದುಃಸ್ಥಿತಿ ನೋಡಿ ನನಗೆ ದುಃಖವಾಗಿದೆ.ಹೀಗಾಗಿ ಹೂಳೆತ್ತುವುದು ಮುಂತಾದ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಮೀನುಗಾರಿಕೆ,ಬಂದರು ಇಲಾಖೆ ಜಂಟಿಯಾಗಿ ಯೋಜನೆ ರೂಪಿಸಲಾಗುವುದು ಎಂದರು.
ಬಂದರು,ಮೀನುಗಾರಿಕೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರಕಾರದ ಅನುದಾನ ಸಾಕಾಗುವುದಿಲ್ಲ.ಹೀಗಾಗಿ ಕೇಂದ್ರ ಸರಕಾರದಲ್ಲಿ ಅನುದಾನಕ್ಕೆ ಬೇಡಿಕೆ ಇಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ,ಮೊಗವೀರ ಮುಖಂಡ ಡಾ.ಜಿ.ಶಂಕರ್, ಆನಂದ ಸಿ.ಕುಂದರ್, ಮೀನುಗಾರಿಕೆ,ಬಂದರು ಇಲಾಖೆ ಅಧಿಕಾರಿ ಕ್ಯಾ.ಸ್ವಾಮಿ, ಅಂಜನಾ ದೇವಿ,ಶ್ರೀನಿವಾಸ ಮೂರ್ತಿ, ಡಯಾಸ್,ಹಂಗಾರಕಟ್ಟೆ ಬಂದರು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಂದ್ರ ಸುವರ್ಣ, ಕೋಡಿ ಕನ್ಯಾಣ ಲಕ್ಷ್ಮಣ ಸುವರ್ಣ ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago