ಕುಂದಾಪುರ:ವಂಡ್ಸೆ ಗ್ರಾಮ ಪಂಚಾಯತಿಯ ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಮಳೆಯಲ್ಲಿ ಕೊಳೆತು ಗಬ್ಬು ನಾರುತ್ತಿದೆ ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು,ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕಸವನ್ನು ಸೂಕ್ತವಾದ ರೀತಿಯಲ್ಲಿ ವಿಲೇವಾರಿ ಮಾಡುವ ದೃಷ್ಟಿಯಿಂದ ಎಸ್ಎಲ್ಆರ್ ಎಂ ಘಟಕವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸಲಾಗಿದೆ.ಸಾರ್ವಜನಿಕರಿಂದ ಉತ್ತಮವಾದ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಎಸ್ಎಲ್ಆರ್ ಎಂ ಘಟಕದ ಸ್ಥಾಪನೆ ಸಾರ್ಥಕ ಮನೋಭಾವವನ್ನು ಕಂಡಿದೆ.
ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ ಬಳಿ ಇದ್ದ ಹಳೆ ಎಸ್ಎಲ್ಆರ್ ಎಂ ಘಟಕವನ್ನು ಜನತಾ ಕಾಲೋನಿ ಬಳಿ ನಿರ್ಮಿಸಿದ ಹೊಸ ಎಸ್ಎಲ್ಆರ್ ಎಂ ಘಟಕಕ್ಕೆ ಪ್ರಸ್ತುತ ಸ್ಥಳಾಂತರ ಮಾಡಲಾಗಿದೆ. ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿದ್ದ ನಿರೂಪಯುಕ್ತ ಕಸವನ್ನು ಅಲ್ಲೆ ಬಿಟ್ಟಿರುವುದರಿಂದ ಮಳೆ ನೀರಿಗೆ ಕೊಳೆತು ಗಬ್ಬು ನಾರುತ್ತಿದ್ದು,ಕೊಳಚೆ ನೀರು ಘಟಕದ ಹತ್ತಿರದಲ್ಲಿರುವ ಶಾಲೆ ಬಾವಿಗೆ ನುಗ್ಗುತ್ತಿದೆ.ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆಯಲ್ಲಿ ಒಟ್ಟು 420 ಮಕ್ಕಳು ಓದುತ್ತಿದ್ದಾರೆ.ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಳೆ ಎಸ್ಎಲ್ಆರ್ ಎಂ ಘಟಕದ ಆವರಣದಲ್ಲಿರುವ ಕಸವನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ ಆಗ್ರಹಿಸಿದ್ದಾರೆ.ಕಸ ವಿಲೇವಾರಿ ಮಾಡಬೇಕೆಂದು ಕಳೆದ ಎರಡು ವರ್ಷಗಳಿಂದ ವಂಡ್ಸೆ ಗ್ರಾಮ ಪಂಚಾಯತ್ ಮತ್ತು ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು, ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ದೂರಿದ್ದಾರೆ.
(ವಂಡ್ಸೆ ಅಂಗನವಾಡಿ ಕೇಂದ್ರದ ಬಳಿ ಇರುವ ಹಳೆ ಎಸ್ಎಲ್ ಆರ್ ಎಂ ಘಟಕದ ದುಸ್ಥಿತಿ ನೋಟ)
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…