ಕುಂದಾಪುರ

ವಂಡ್ಸೆ ಎಸ್ಎಲ್ಆರ್ ಎಂ ಘಟಕದಲ್ಲಿ ಗಬ್ಬು ನಾರುತ್ತಿದೆ ಕಸ:ವಿಲೇವಾರಿಗೆ ಆಗ್ರಹ

Share


ಕುಂದಾಪುರ:ವಂಡ್ಸೆ ಗ್ರಾಮ ಪಂಚಾಯತಿಯ ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಮಳೆಯಲ್ಲಿ ಕೊಳೆತು ಗಬ್ಬು ನಾರುತ್ತಿದೆ ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು,ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


ಗ್ರಾಮೀಣ ಪ್ರದೇಶದಲ್ಲಿ ಕಸವನ್ನು ಸೂಕ್ತವಾದ ರೀತಿಯಲ್ಲಿ ವಿಲೇವಾರಿ ಮಾಡುವ ದೃಷ್ಟಿಯಿಂದ ಎಸ್ಎಲ್ಆರ್ ಎಂ ಘಟಕವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸಲಾಗಿದೆ.ಸಾರ್ವಜನಿಕರಿಂದ ಉತ್ತಮವಾದ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಎಸ್ಎಲ್ಆರ್ ಎಂ ಘಟಕದ ಸ್ಥಾಪನೆ ಸಾರ್ಥಕ ಮನೋಭಾವವನ್ನು ಕಂಡಿದೆ.
ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ ಬಳಿ ಇದ್ದ ಹಳೆ ಎಸ್ಎಲ್ಆರ್ ಎಂ ಘಟಕವನ್ನು ಜನತಾ ಕಾಲೋನಿ ಬಳಿ ನಿರ್ಮಿಸಿದ ಹೊಸ ಎಸ್ಎಲ್ಆರ್ ಎಂ ಘಟಕಕ್ಕೆ ಪ್ರಸ್ತುತ ಸ್ಥಳಾಂತರ ಮಾಡಲಾಗಿದೆ. ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿದ್ದ ನಿರೂಪಯುಕ್ತ ಕಸವನ್ನು ಅಲ್ಲೆ ಬಿಟ್ಟಿರುವುದರಿಂದ ಮಳೆ ನೀರಿಗೆ ಕೊಳೆತು ಗಬ್ಬು ನಾರುತ್ತಿದ್ದು,ಕೊಳಚೆ ನೀರು ಘಟಕದ ಹತ್ತಿರದಲ್ಲಿರುವ ಶಾಲೆ ಬಾವಿಗೆ ನುಗ್ಗುತ್ತಿದೆ.ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆಯಲ್ಲಿ ಒಟ್ಟು 420 ಮಕ್ಕಳು ಓದುತ್ತಿದ್ದಾರೆ.ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಳೆ ಎಸ್ಎಲ್ಆರ್ ಎಂ ಘಟಕದ ಆವರಣದಲ್ಲಿರುವ ಕಸವನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ ಆಗ್ರಹಿಸಿದ್ದಾರೆ.ಕಸ ವಿಲೇವಾರಿ ಮಾಡಬೇಕೆಂದು ಕಳೆದ ಎರಡು ವರ್ಷಗಳಿಂದ ವಂಡ್ಸೆ ಗ್ರಾಮ ಪಂಚಾಯತ್ ಮತ್ತು ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು, ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ದೂರಿದ್ದಾರೆ.

(ವಂಡ್ಸೆ ಅಂಗನವಾಡಿ ಕೇಂದ್ರದ ಬಳಿ ಇರುವ ಹಳೆ ಎಸ್ಎಲ್ ಆರ್ ಎಂ ಘಟಕದ ದುಸ್ಥಿತಿ ನೋಟ)

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago