ಕುಂದಾಪುರ

ವಂಡ್ಸೆ ಎಸ್ಎಲ್ಆರ್ ಎಂ ಘಟಕದಲ್ಲಿ ಗಬ್ಬು ನಾರುತ್ತಿದೆ ಕಸ:ವಿಲೇವಾರಿಗೆ ಆಗ್ರಹ

Share

Advertisement
Advertisement


ಕುಂದಾಪುರ:ವಂಡ್ಸೆ ಗ್ರಾಮ ಪಂಚಾಯತಿಯ ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಮಳೆಯಲ್ಲಿ ಕೊಳೆತು ಗಬ್ಬು ನಾರುತ್ತಿದೆ ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು,ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Advertisement


ಗ್ರಾಮೀಣ ಪ್ರದೇಶದಲ್ಲಿ ಕಸವನ್ನು ಸೂಕ್ತವಾದ ರೀತಿಯಲ್ಲಿ ವಿಲೇವಾರಿ ಮಾಡುವ ದೃಷ್ಟಿಯಿಂದ ಎಸ್ಎಲ್ಆರ್ ಎಂ ಘಟಕವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸಲಾಗಿದೆ.ಸಾರ್ವಜನಿಕರಿಂದ ಉತ್ತಮವಾದ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಎಸ್ಎಲ್ಆರ್ ಎಂ ಘಟಕದ ಸ್ಥಾಪನೆ ಸಾರ್ಥಕ ಮನೋಭಾವವನ್ನು ಕಂಡಿದೆ.
ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ ಬಳಿ ಇದ್ದ ಹಳೆ ಎಸ್ಎಲ್ಆರ್ ಎಂ ಘಟಕವನ್ನು ಜನತಾ ಕಾಲೋನಿ ಬಳಿ ನಿರ್ಮಿಸಿದ ಹೊಸ ಎಸ್ಎಲ್ಆರ್ ಎಂ ಘಟಕಕ್ಕೆ ಪ್ರಸ್ತುತ ಸ್ಥಳಾಂತರ ಮಾಡಲಾಗಿದೆ. ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿದ್ದ ನಿರೂಪಯುಕ್ತ ಕಸವನ್ನು ಅಲ್ಲೆ ಬಿಟ್ಟಿರುವುದರಿಂದ ಮಳೆ ನೀರಿಗೆ ಕೊಳೆತು ಗಬ್ಬು ನಾರುತ್ತಿದ್ದು,ಕೊಳಚೆ ನೀರು ಘಟಕದ ಹತ್ತಿರದಲ್ಲಿರುವ ಶಾಲೆ ಬಾವಿಗೆ ನುಗ್ಗುತ್ತಿದೆ.ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆಯಲ್ಲಿ ಒಟ್ಟು 420 ಮಕ್ಕಳು ಓದುತ್ತಿದ್ದಾರೆ.ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಳೆ ಎಸ್ಎಲ್ಆರ್ ಎಂ ಘಟಕದ ಆವರಣದಲ್ಲಿರುವ ಕಸವನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ ಆಗ್ರಹಿಸಿದ್ದಾರೆ.ಕಸ ವಿಲೇವಾರಿ ಮಾಡಬೇಕೆಂದು ಕಳೆದ ಎರಡು ವರ್ಷಗಳಿಂದ ವಂಡ್ಸೆ ಗ್ರಾಮ ಪಂಚಾಯತ್ ಮತ್ತು ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು, ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ದೂರಿದ್ದಾರೆ.

(ವಂಡ್ಸೆ ಅಂಗನವಾಡಿ ಕೇಂದ್ರದ ಬಳಿ ಇರುವ ಹಳೆ ಎಸ್ಎಲ್ ಆರ್ ಎಂ ಘಟಕದ ದುಸ್ಥಿತಿ ನೋಟ)

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

16 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

16 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

17 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago