ಕುಂದಾಪುರ:ವಂಡ್ಸೆ ಗ್ರಾಮ ಪಂಚಾಯತಿಯ ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಮಳೆಯಲ್ಲಿ ಕೊಳೆತು ಗಬ್ಬು ನಾರುತ್ತಿದೆ ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು,ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕಸವನ್ನು ಸೂಕ್ತವಾದ ರೀತಿಯಲ್ಲಿ ವಿಲೇವಾರಿ ಮಾಡುವ ದೃಷ್ಟಿಯಿಂದ ಎಸ್ಎಲ್ಆರ್ ಎಂ ಘಟಕವನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ಥಾಪಿಸಲಾಗಿದೆ.ಸಾರ್ವಜನಿಕರಿಂದ ಉತ್ತಮವಾದ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಎಸ್ಎಲ್ಆರ್ ಎಂ ಘಟಕದ ಸ್ಥಾಪನೆ ಸಾರ್ಥಕ ಮನೋಭಾವವನ್ನು ಕಂಡಿದೆ.
ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ ಬಳಿ ಇದ್ದ ಹಳೆ ಎಸ್ಎಲ್ಆರ್ ಎಂ ಘಟಕವನ್ನು ಜನತಾ ಕಾಲೋನಿ ಬಳಿ ನಿರ್ಮಿಸಿದ ಹೊಸ ಎಸ್ಎಲ್ಆರ್ ಎಂ ಘಟಕಕ್ಕೆ ಪ್ರಸ್ತುತ ಸ್ಥಳಾಂತರ ಮಾಡಲಾಗಿದೆ. ಹಳೆ ಎಸ್ಎಲ್ಆರ್ ಎಂ ಘಟಕದಲ್ಲಿದ್ದ ನಿರೂಪಯುಕ್ತ ಕಸವನ್ನು ಅಲ್ಲೆ ಬಿಟ್ಟಿರುವುದರಿಂದ ಮಳೆ ನೀರಿಗೆ ಕೊಳೆತು ಗಬ್ಬು ನಾರುತ್ತಿದ್ದು,ಕೊಳಚೆ ನೀರು ಘಟಕದ ಹತ್ತಿರದಲ್ಲಿರುವ ಶಾಲೆ ಬಾವಿಗೆ ನುಗ್ಗುತ್ತಿದೆ.ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆಯಲ್ಲಿ ಒಟ್ಟು 420 ಮಕ್ಕಳು ಓದುತ್ತಿದ್ದಾರೆ.ಮಕ್ಕಳ ಆರೋಗ್ಯದ ದೃಷ್ಟಿಯಿಂದ ಹಳೆ ಎಸ್ಎಲ್ಆರ್ ಎಂ ಘಟಕದ ಆವರಣದಲ್ಲಿರುವ ಕಸವನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ವಂಡ್ಸೆ ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ ಆಗ್ರಹಿಸಿದ್ದಾರೆ.ಕಸ ವಿಲೇವಾರಿ ಮಾಡಬೇಕೆಂದು ಕಳೆದ ಎರಡು ವರ್ಷಗಳಿಂದ ವಂಡ್ಸೆ ಗ್ರಾಮ ಪಂಚಾಯತ್ ಮತ್ತು ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು, ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ದೂರಿದ್ದಾರೆ.
(ವಂಡ್ಸೆ ಅಂಗನವಾಡಿ ಕೇಂದ್ರದ ಬಳಿ ಇರುವ ಹಳೆ ಎಸ್ಎಲ್ ಆರ್ ಎಂ ಘಟಕದ ದುಸ್ಥಿತಿ ನೋಟ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…