ಕುಂದಾಪುರ:ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯಾಡಿ ಸಮೀಪದ
ರಸ್ತೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಸ್ಕೂಟಿ ರಸ್ತೆ ಪಕ್ಕದಲ್ಲಿದ್ದ ಕೆರೆಗೆ ಬಿದ್ದು ಸವಾರರಾದ ಉದ್ಯಮಿ ದಿವಾಕರ ಶೆಟ್ಟಿ (65) ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ದಿವಾಕರ ಶೆಟ್ಟಿ ಅವರು ಸ್ಕೂಟಿಯಲ್ಲಿ ಮನೆಗೆ ಸಂಚರಿಸುವ ವೇಳೆ ಸ್ಕಿಡ್ ಆಗಿ ಸ್ಕೂಟಿ ಸಮೇತ ಕೆರೆಗೆ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ.
ಮಲ್ಯಾಡಿ ರಸ್ತೆ ಪಕ್ಕದಲ್ಲಿರುವ ಬೃಹತ್ ಕೆರೆಗೆ ಯಾವುದೇ ರೀತಿಯ ತಡೆಗೋಡೆ ಇಲ್ಲದ ಕಾರಣ 15 ರಿಂದ 20 ಅಡಿ ಆಳದ ಕೆರೆಗೆ ಸ್ಕೂಟರ್ ಸಮೇತ ದಿವಾಕರ ಶೆಟ್ಟಿ ಬಿದಿದ್ದಾರೆ.ಸಮಯ ಮೀರಿದರು ಮನೆಗೆ ಬಾರದಿರುವ ಕಾರಣ ಮನೆಯವರು ಸಂಬಂಧಪಟ್ಟ ಸ್ಥಳದಲ್ಲಿ ಹುಡುಕಾಟ ಮಾಡಿದ್ದರು ಅಲ್ಲಿ ಪತ್ತೆ ಆಗದಿರುವ ಹಿನ್ನೆಲೆಯಲ್ಲಿ ಸ್ಥಳೀಯರ ಸಹಕಾರದೊಂದಿಗೆ ತೀವೃವಾಗಿ ಹುಡುಕಾಟ ಮುಂದುವರಿಸಿದಾಗ ಸಮೀಪದ ಕೆರೆಯಲ್ಲಿ ಸ್ಕೂಟಿ ಪತ್ತೆಯಾಗಿರುವುದನ್ನು ಗಮನಿಸಿದ್ದಾರೆ.ಕೂಡಲೇ ಪೊಲೀಸರು ,ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದಾರೆ.ಘಟನೆ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಕೆರೆಗೆ ಧುಮುಕಿ ಸ್ಕೂಟರ್ ಅನ್ನು ಮೇಲಕ್ಕೆ ಎತ್ತಿದರು.ಸ್ಕೂಟಿ ಸವಾರನಿಗಾಗಿ ಕೆರೆಯಲ್ಲಿ ಹುಡುಕಾಟ ಮುಂದುವರೆಸಿದಾಗ ನಸುಕಿನ ಜಾವ 1:30ರ ಸುಮಾರಿಗೆ ಕೆರೆಯಲ್ಲಿ ದಿವಾಕರ ಶೆಟ್ಟಿ ಅವರ ಮೃತ ದೇಹ ಪತ್ತೆ ಆಗಿದೆ ಎಂದು ತಿಳಿದುಬಂದಿದೆ.ಈಶ್ವರ್ ಮಲ್ಪೆ ಜೊತೆ ಕೋಟದ ಜೀವನ್ ಮಿತ್ರ ತಂಡ ಸಾಥ್ ನೀಡಿದ್ದು.ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…