ಕುಂದಾಪುರ

ಸ್ಕೂಟಿ ಸಮೇತ ಕೆರೆಗೆ ಬಿದ್ದು ಉದ್ಯಮಿ ಸಾವು

Share

ಕುಂದಾಪುರ:ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲ್ಯಾಡಿ ಸಮೀಪದ
ರಸ್ತೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಸ್ಕೂಟಿ ರಸ್ತೆ ಪಕ್ಕದಲ್ಲಿದ್ದ ಕೆರೆಗೆ ಬಿದ್ದು ಸವಾರರಾದ ಉದ್ಯಮಿ ದಿವಾಕರ ಶೆಟ್ಟಿ (65) ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.


ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ದಿವಾಕರ ಶೆಟ್ಟಿ ಅವರು ಸ್ಕೂಟಿಯಲ್ಲಿ ಮನೆಗೆ ಸಂಚರಿಸುವ ವೇಳೆ ಸ್ಕಿಡ್ ಆಗಿ ಸ್ಕೂಟಿ ಸಮೇತ ಕೆರೆಗೆ ಬಿದ್ದ ಪರಿಣಾಮ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ.
ಮಲ್ಯಾಡಿ ರಸ್ತೆ ಪಕ್ಕದಲ್ಲಿರುವ ಬೃಹತ್ ಕೆರೆಗೆ ಯಾವುದೇ ರೀತಿಯ ತಡೆಗೋಡೆ ಇಲ್ಲದ ಕಾರಣ 15 ರಿಂದ 20 ಅಡಿ ಆಳದ ಕೆರೆಗೆ ಸ್ಕೂಟರ್ ಸಮೇತ ದಿವಾಕರ ಶೆಟ್ಟಿ ಬಿದಿದ್ದಾರೆ.ಸಮಯ ಮೀರಿದರು ಮನೆಗೆ ಬಾರದಿರುವ ಕಾರಣ ಮನೆಯವರು ಸಂಬಂಧಪಟ್ಟ ಸ್ಥಳದಲ್ಲಿ ಹುಡುಕಾಟ ಮಾಡಿದ್ದರು ಅಲ್ಲಿ ಪತ್ತೆ ಆಗದಿರುವ ಹಿನ್ನೆಲೆಯಲ್ಲಿ ಸ್ಥಳೀಯರ ಸಹಕಾರದೊಂದಿಗೆ ತೀವೃವಾಗಿ ಹುಡುಕಾಟ ಮುಂದುವರಿಸಿದಾಗ ಸಮೀಪದ ಕೆರೆಯಲ್ಲಿ ಸ್ಕೂಟಿ ಪತ್ತೆಯಾಗಿರುವುದನ್ನು ಗಮನಿಸಿದ್ದಾರೆ.ಕೂಡಲೇ ಪೊಲೀಸರು ,ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದಾರೆ.ಘಟನೆ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಕೆರೆಗೆ ಧುಮುಕಿ ಸ್ಕೂಟರ್ ಅನ್ನು ಮೇಲಕ್ಕೆ ಎತ್ತಿದರು.ಸ್ಕೂಟಿ ಸವಾರನಿಗಾಗಿ ಕೆರೆಯಲ್ಲಿ ಹುಡುಕಾಟ ಮುಂದುವರೆಸಿದಾಗ ನಸುಕಿನ ಜಾವ 1:30ರ ಸುಮಾರಿಗೆ ಕೆರೆಯಲ್ಲಿ ದಿವಾಕರ ಶೆಟ್ಟಿ ಅವರ ಮೃತ ದೇಹ ಪತ್ತೆ ಆಗಿದೆ ಎಂದು ತಿಳಿದುಬಂದಿದೆ.ಈಶ್ವರ್ ಮಲ್ಪೆ ಜೊತೆ ಕೋಟದ ಜೀವನ್ ಮಿತ್ರ ತಂಡ ಸಾಥ್ ನೀಡಿದ್ದು.ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago