ಪ್ರಮುಖ

ಕರಾವಳಿ ಬೈಲಿಗೆ ಸಹ್ಯಾದ್ರಿ ಬ್ರಹ್ಮ ಹೊಸ ಭತ್ತದ ತಳಿ:ರೈತರಿಗೆ ಉಚಿತವಾಗಿ ಬೀಜ ವಿತರಣೆ

Share

ಬ್ರಹ್ಮಾವರ:ವೈವಿಧ್ಯಮಯ ವಾತಾವಾರಣವನ್ನು ಹೊಂದಿರುವ ಕರಾವಳಿ ತೀರ ಪ್ರದೇಶಕ್ಕೆ ಒಗ್ಗಿ ಕೊಳ್ಳುವಂತಹ ಭತ್ತದ ತಳಿಗಳನ್ನು ಆವಿಷ್ಕಾರ ಮಾಡುವಲ್ಲಿ ಸಾಕಷ್ಟು ಪ್ರಯತ್ನವನ್ನು ಮಾಡಿರುವ ವಲಯ ಸಂಶೋಧನಾ ಕೇಂದ್ರ ಬ್ರಹ್ಮಾವರ ಸಂಸ್ಥೆ ಸಹ್ಯಾದ್ರಿ ಬ್ರಹ್ಮ ಎನ್ನುವ ಹೊಸ ಭತ್ತದ ತಳಿಯನ್ನು ಸಂಶೋಧನೆಯನ್ನು ಮಾಡಿದ್ದು ಪ್ರಯೋಗ ಯಶಸ್ವಿಯಾಗುವುದರ ಮುಖೇನ ಕರಾವಳಿ ಮಣ್ಣಿಗೆ ಹೊಸ ಭತ್ತದ ತಳಿ ಆಗಮನವಾಗಿದೆ.


ಕುಚ್ಚಲಕ್ಕಿ (ಕೆಂಪು ಭತ್ತ) ಎನ್ನುವುದು ಕರ್ನಾಟಕ ಕರಾವಳಿ ಪ್ರದೇಶದ ಪ್ರಮುಖ ಆಹಾರ ಬೆಳೆಯಾಗಿದೆ,ಮಲೆನಾಡು ಮತ್ತು ಕರಾವಳಿ ಪ್ರದೇಶವನ್ನು ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ,ಬೈಂದೂರು,ಬ್ರಹ್ಮವಾರ,ಉಡುಪಿ ಸಹಿತ ದ.ಕ ಜಿಲ್ಲೆಯ ಭಾಗಗಳ ಭೌಗೋಳಿಕ ಸನ್ನಿವೇಶ ಹಾಗೂ ವಾತಾವರಣ,ಮಣ್ಣಿನ ಗುಣಧರ್ಮಗಳು ವಿಶಿಷ್ಟವಾದ ರೀತಿಯಿಂದ ಕೂಡಿದೆ.ಇಲ್ಲಿನ ಮಣ್ಣಿಗೆ
ಹೊಂದಿಕೊಂಡು ಬೆಳೆಯುವಂತಹ ಸಾವಿರಾರು ಸಾಂಪ್ರದಾಯಿಕ ಭತ್ತದ ತಳಿಗಳನ್ನು ಬೆಳೆದುಕೊಂಡು ಹೋಗುವಂತಹ ಸಮಯದಲ್ಲಿ,ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಾದ ಸಂಶೋಧನಾ ಬೆಳವಣಿಗೆಯಿಂದಾಗಿ (ಹಸಿರು ಕಾಂತ್ರಿ) ನಾನಾ ಭಾಗಗಳಲ್ಲಿ ವಿವಿಧ ತಳಿಗಳನ್ನು ಪರಿಚಯಿಸುವಲ್ಲಿ ಸಂಶೋಧನೆ ಸಂಸ್ಥೆಗಳು ಯಶಸ್ವಿಯಾಗಿವೆ.ಸಂಶೋಧನೆಯ ಫಲವಾಗಿ ಕರಾವಳಿ ಭಾಗಗಕ್ಕೆ ಜಯ ಮತ್ತು ಐ.ಆರ್-8 ಎಂಬ ಬಿಳಿ ಭತ್ತದ ತಳಿಗಳನ್ನು ಈ ಹಿಂದೆ ಪರಿಚಯಿಸಲಾಗಿತ್ತು.
ಸಹ್ಯಾದ್ರಿ ಬ್ರಹ್ಮ ಭತ್ತದ ತಳಿ ಬೀಜವನ್ನು ರೈತರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago