ಕುಂದಾಪುರ

ಗುರುಪೂರ್ಣಿಮಾ-ಗುರುಪೂಜೆ ಕಾರ್ಯಕ್ರಮ

Share

Advertisement
Advertisement


ಬೈಂದೂರು:ಭಾರತೀಯ ಸಂಗೀತ ಪ್ರಕಾರಗಳು ಶಾಸ್ರ್ತಾಧಾರಿತವಾಗಿದ್ದು ಅವುಗಳನ್ನು ವೇದಗಳೊಂದಿಗೆ ಸಮೀಕರಣಗೊಳಿಸಲಾಗಿದೆ.ನಮ್ಮ ಮಕ್ಕಳನ್ನು ಶಿಕ್ಷಣದ ಜತೆಗೆ ಯಾವುದಾದರೊಂದು ಸಂಗೀತ ಪ್ರಕಾರದ ಅಧ್ಯಯನದಲ್ಲಿ ತೊಡಗಿಸುವುದರಿಂದ ಅವರ ವ್ಯಕ್ತಿತ್ವ ಬೆಳಗುತ್ತದೆ ಎಂದು ಸಂಸ್ಕøತ ಪ್ರಾಧ್ಯಾಪಕ ಡಾ.ಗೋಪಾಲಕೃಷ್ಣ ಭಟ್ ಹೇಳಿದರು.
ಕುಂದಾಪುರದ ಗುರುಪರಂಪರಾ ಸಂಗೀತಸಭಾ ಆಶ್ರ್ರಯದಲ್ಲಿ ಮರವಂತೆ ಸಾಧನಾ ಸಮುದಾಯ ಭವನದ ವಿ.ಕೆ.ಕಾಮತ್ ಸಭಾಗೃಹದಲ್ಲಿ ನಡೆದ ಗುರುಪೂರ್ಣಿಮಾ-ಗುರುಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಾಸ್ತ್ರೀಯ ಸಂಗೀತದ ಕಲಿಕೆ ಮತ್ತು ಶ್ರವಣದಿಂದ ಮನುಷ್ಯರಿಗೆ ವಿಶೇಷವಾದ ಅನುಭೂತಿ ಸಿದ್ಧಿಸುವುದರ ಜತೆಗೆ ಹೃದಯ ಸಂಸ್ಕಾರಗೊಳ್ಳುತ್ತದೆ.ನಾದಕ್ಕೆ ಎಲ್ಲ ಜೀವಿಗಳ ಮೇಲೂ ಧನಾತ್ಮಕ ಪರಿಣಾಮ ಬೀರುವ ಶಕ್ತಿ ಇದೆ ಎಂದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಗೋವಿಂದ ಅಡಿಗ,ಶಿಕ್ಷಕ ಶಂಭು ಭಟ್,ಲೇಖಕಿ ನರ್ಮದಾ ಪ್ರಭು ಉಪಸ್ಥಿತರಿದ್ದರು.ಸಂಗೀತ ತರಗತಿ ವಿದ್ಯಾರ್ಥಿಗಳು ಸಂಗೀತ ಕಚೇರಿ ನಡೆಸಿಕೊಟ್ಟರು.ಶಶಿಕಿರಣ ಮಣಿಪಾಲ್,ಗಣಪತಿ ಹೆಗಡೆ ಹರಿಕೇರಿ,ಅಜಯ್ ಹೆಗಡೆ ವರ್ಗಾಸುರ ಸಹವಾದನ ನೀಡಿದರು.ಗುರುಪರಂಪರಾ ಸಂಗೀತಸಭಾದ ವಿದ್ಯಾರ್ಥಿಗಳು ವಿದ್ವಾನ್ ಸತೀಶ ಭಟ್ ಮತ್ತು ವಿದುಷಿ ಪ್ರತಿಮಾ ಭಟ್ ದಂಪತಿಗೆ ಗುರುವಂದನೆ ಸಲ್ಲಿಸಿದರು.ನೇಹಾ ಹೊಳ್ಳ ಸ್ವಾಗತಿಸಿದರು.ಸಭ್ಯಾ ನಿರೂಪಿಸಿದರು.ಸಾತ್ಯಕಿ ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

15 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

15 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

17 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

20 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago