ಕುಂದಾಪುರ

ಗುರುಪೂರ್ಣಿಮಾ-ಗುರುಪೂಜೆ ಕಾರ್ಯಕ್ರಮ

Share


ಬೈಂದೂರು:ಭಾರತೀಯ ಸಂಗೀತ ಪ್ರಕಾರಗಳು ಶಾಸ್ರ್ತಾಧಾರಿತವಾಗಿದ್ದು ಅವುಗಳನ್ನು ವೇದಗಳೊಂದಿಗೆ ಸಮೀಕರಣಗೊಳಿಸಲಾಗಿದೆ.ನಮ್ಮ ಮಕ್ಕಳನ್ನು ಶಿಕ್ಷಣದ ಜತೆಗೆ ಯಾವುದಾದರೊಂದು ಸಂಗೀತ ಪ್ರಕಾರದ ಅಧ್ಯಯನದಲ್ಲಿ ತೊಡಗಿಸುವುದರಿಂದ ಅವರ ವ್ಯಕ್ತಿತ್ವ ಬೆಳಗುತ್ತದೆ ಎಂದು ಸಂಸ್ಕøತ ಪ್ರಾಧ್ಯಾಪಕ ಡಾ.ಗೋಪಾಲಕೃಷ್ಣ ಭಟ್ ಹೇಳಿದರು.
ಕುಂದಾಪುರದ ಗುರುಪರಂಪರಾ ಸಂಗೀತಸಭಾ ಆಶ್ರ್ರಯದಲ್ಲಿ ಮರವಂತೆ ಸಾಧನಾ ಸಮುದಾಯ ಭವನದ ವಿ.ಕೆ.ಕಾಮತ್ ಸಭಾಗೃಹದಲ್ಲಿ ನಡೆದ ಗುರುಪೂರ್ಣಿಮಾ-ಗುರುಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಾಸ್ತ್ರೀಯ ಸಂಗೀತದ ಕಲಿಕೆ ಮತ್ತು ಶ್ರವಣದಿಂದ ಮನುಷ್ಯರಿಗೆ ವಿಶೇಷವಾದ ಅನುಭೂತಿ ಸಿದ್ಧಿಸುವುದರ ಜತೆಗೆ ಹೃದಯ ಸಂಸ್ಕಾರಗೊಳ್ಳುತ್ತದೆ.ನಾದಕ್ಕೆ ಎಲ್ಲ ಜೀವಿಗಳ ಮೇಲೂ ಧನಾತ್ಮಕ ಪರಿಣಾಮ ಬೀರುವ ಶಕ್ತಿ ಇದೆ ಎಂದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಗೋವಿಂದ ಅಡಿಗ,ಶಿಕ್ಷಕ ಶಂಭು ಭಟ್,ಲೇಖಕಿ ನರ್ಮದಾ ಪ್ರಭು ಉಪಸ್ಥಿತರಿದ್ದರು.ಸಂಗೀತ ತರಗತಿ ವಿದ್ಯಾರ್ಥಿಗಳು ಸಂಗೀತ ಕಚೇರಿ ನಡೆಸಿಕೊಟ್ಟರು.ಶಶಿಕಿರಣ ಮಣಿಪಾಲ್,ಗಣಪತಿ ಹೆಗಡೆ ಹರಿಕೇರಿ,ಅಜಯ್ ಹೆಗಡೆ ವರ್ಗಾಸುರ ಸಹವಾದನ ನೀಡಿದರು.ಗುರುಪರಂಪರಾ ಸಂಗೀತಸಭಾದ ವಿದ್ಯಾರ್ಥಿಗಳು ವಿದ್ವಾನ್ ಸತೀಶ ಭಟ್ ಮತ್ತು ವಿದುಷಿ ಪ್ರತಿಮಾ ಭಟ್ ದಂಪತಿಗೆ ಗುರುವಂದನೆ ಸಲ್ಲಿಸಿದರು.ನೇಹಾ ಹೊಳ್ಳ ಸ್ವಾಗತಿಸಿದರು.ಸಭ್ಯಾ ನಿರೂಪಿಸಿದರು.ಸಾತ್ಯಕಿ ವಂದಿಸಿದರು.

Advertisement

Share
Team Kundapur Times

Recent Posts

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

7 days ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago