ಬೈಂದೂರು:ಭಾರತೀಯ ಸಂಗೀತ ಪ್ರಕಾರಗಳು ಶಾಸ್ರ್ತಾಧಾರಿತವಾಗಿದ್ದು ಅವುಗಳನ್ನು ವೇದಗಳೊಂದಿಗೆ ಸಮೀಕರಣಗೊಳಿಸಲಾಗಿದೆ.ನಮ್ಮ ಮಕ್ಕಳನ್ನು ಶಿಕ್ಷಣದ ಜತೆಗೆ ಯಾವುದಾದರೊಂದು ಸಂಗೀತ ಪ್ರಕಾರದ ಅಧ್ಯಯನದಲ್ಲಿ ತೊಡಗಿಸುವುದರಿಂದ ಅವರ ವ್ಯಕ್ತಿತ್ವ ಬೆಳಗುತ್ತದೆ ಎಂದು ಸಂಸ್ಕøತ ಪ್ರಾಧ್ಯಾಪಕ ಡಾ.ಗೋಪಾಲಕೃಷ್ಣ ಭಟ್ ಹೇಳಿದರು.
ಕುಂದಾಪುರದ ಗುರುಪರಂಪರಾ ಸಂಗೀತಸಭಾ ಆಶ್ರ್ರಯದಲ್ಲಿ ಮರವಂತೆ ಸಾಧನಾ ಸಮುದಾಯ ಭವನದ ವಿ.ಕೆ.ಕಾಮತ್ ಸಭಾಗೃಹದಲ್ಲಿ ನಡೆದ ಗುರುಪೂರ್ಣಿಮಾ-ಗುರುಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಾಸ್ತ್ರೀಯ ಸಂಗೀತದ ಕಲಿಕೆ ಮತ್ತು ಶ್ರವಣದಿಂದ ಮನುಷ್ಯರಿಗೆ ವಿಶೇಷವಾದ ಅನುಭೂತಿ ಸಿದ್ಧಿಸುವುದರ ಜತೆಗೆ ಹೃದಯ ಸಂಸ್ಕಾರಗೊಳ್ಳುತ್ತದೆ.ನಾದಕ್ಕೆ ಎಲ್ಲ ಜೀವಿಗಳ ಮೇಲೂ ಧನಾತ್ಮಕ ಪರಿಣಾಮ ಬೀರುವ ಶಕ್ತಿ ಇದೆ ಎಂದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ಕೆ.ಗೋವಿಂದ ಅಡಿಗ,ಶಿಕ್ಷಕ ಶಂಭು ಭಟ್,ಲೇಖಕಿ ನರ್ಮದಾ ಪ್ರಭು ಉಪಸ್ಥಿತರಿದ್ದರು.ಸಂಗೀತ ತರಗತಿ ವಿದ್ಯಾರ್ಥಿಗಳು ಸಂಗೀತ ಕಚೇರಿ ನಡೆಸಿಕೊಟ್ಟರು.ಶಶಿಕಿರಣ ಮಣಿಪಾಲ್,ಗಣಪತಿ ಹೆಗಡೆ ಹರಿಕೇರಿ,ಅಜಯ್ ಹೆಗಡೆ ವರ್ಗಾಸುರ ಸಹವಾದನ ನೀಡಿದರು.ಗುರುಪರಂಪರಾ ಸಂಗೀತಸಭಾದ ವಿದ್ಯಾರ್ಥಿಗಳು ವಿದ್ವಾನ್ ಸತೀಶ ಭಟ್ ಮತ್ತು ವಿದುಷಿ ಪ್ರತಿಮಾ ಭಟ್ ದಂಪತಿಗೆ ಗುರುವಂದನೆ ಸಲ್ಲಿಸಿದರು.ನೇಹಾ ಹೊಳ್ಳ ಸ್ವಾಗತಿಸಿದರು.ಸಭ್ಯಾ ನಿರೂಪಿಸಿದರು.ಸಾತ್ಯಕಿ ವಂದಿಸಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…