ಮನೆ ಮೇಲೆ ಗುಡ್ಡ ಜರಿದು ಮಹಿಳೆಯೊಬ್ಬರ ಸಾವು:ದ.ಕ ಜಿಲ್ಲಾಧಿಕಾರಿ ಭೇಟಿ

Share

Advertisement
Advertisement
Advertisement

ಮಂಗಳೂರು:ಭಾರಿ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಎಂಬಲ್ಲಿ ಭೂಕುಸಿತದಿಂದ ಗುಡ್ಡ ಜರಿದು ಮನೆ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮನೆ ಮೇಲೆ ಗುಡ್ಡ ಜರಿದು ಹಾನಿ ಸಂಭವಿಸಿದ ಘಟನಾ ಸ್ಥಳಕ್ಕೆ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವಘಡ ಸಂಭವಿಸಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಐದು ಲಕ್ಷ.ರೂ ಪರಿಹಾರ ಹಾಗೂ ಮನೆ ರಿಪೇರಿಗೆ 1.20 ಲಕ್ಷ.ರೂ ಪರಿಹಾರವನ್ನು ಸರಕಾರದಿಂದ ನೀಡುವ ಭರವಸೆಯನ್ನು ನೀಡಿದರು.ತಾಲೂಕಿನಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ವಿ.ಕೂಡಲಗಿ,ತಾ.ಪಂ.
ಇ.ಒ.ರಾಜಣ್ಣ ,ಪಿಡಿಒ ಲಕ್ಷಣ್ ಮತ್ತು ಇಲಾಖಾ ಅಧಿಕಾರಿಗಳು
ಉಪಸ್ಥಿತರಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page