ರಾಜ್ಯ

ಇತಿಹಾಸದಲ್ಲೇ ಇದು ಅಪರೂಪದ ಬಜೆಟ್ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share

ಬೆಂಗಳೂರು:ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಟ್‌ನಲ್ಲಿ ಪ್ರತಿಬಿಂಬಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2023 -24ನೇ ಸಾಲಿನ ಬಜೆಟ್‌ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಣ್ಣಿಸಿದ್ದಾರೆ.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಟ್‌ನಲ್ಲಿ ಪ್ರತಿಬಿಂಬಿತವಾಗಿದೆ. ಪ್ರಾದೇಶಿಕವಾಗಿ ನೋಡಿದರೂ, ಇಲಾಖಾವಾರು ನೋಡಿದರೂ ಎಲ್ಲ ದೃಷ್ಟಿಯಿಂದಲೂ ಬಜೆಟ್ ಅತ್ಯಂತ ಸಮತೋಲಿತವಾಗಿದೆ. ಎಲ್ಲ ಜಿಲ್ಲೆಗಳಿಗೂ, ಎಲ್ಲ ಇಲಾಖೆಗಳಿಗೂ ಹೇರಳವಾಗಿ ಹಣ ಒದಗಿಸಲಾಗಿದೆ.
ರಾಜ್ಯದ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯವಾದ ರೀತಿಯಲ್ಲಿ ಬಜೆಟ್ ರೂಪಿಸಲಾಗಿದೆ. ಕೃಷಿ, ನೀರಾವರಿ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ. ಯಾರಿಗೂ ಅಸಮಾಧಾನವಾಗದಂತೆ, ಎಲ್ಲರಲ್ಲೂ ವಿಶ್ವಾಸ ಮೂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ತಯಾರಿಸಿದ್ದಾರೆ.
ಕಾಂಗ್ರೆಸ್ ನೀಡಿದ ಎಲ್ಲ ಗ್ಯಾರಂಟಿ ಯೋಜನೆಗಳ ಜಾರಿಗೆ ಅತ್ಯಂತ ವ್ಯವಸ್ಥಿತವಾಗಿ, ಯಾವುದೇ ವರ್ಗದವರಿಗೂ ಹೊರೆಯಾಗದ ರೀತಿಯಲ್ಲಿ ಹಣ ಹೊಂದಿಸಲಾಗಿದೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುವ ಸರಕಾರ ಎನ್ನುವುದನ್ನು ಜನಮಾನಸದಲ್ಲಿ ಮೂಡಿಸಲು ಯಶಸ್ವಿಯಾಗಿದ್ದಾರೆ. ಈ ಬಜೆಟ್ ಅನುಷ್ಠಾನದೊಂದಿಗೆ ಮುಂದಿನ 5 ವರ್ಷದಲ್ಲಿ ರಾಜ್ಯ ಅತ್ಯಂತ ವೇಗವಾಗಿ, ಸಮೃದ್ಧವಾಗಿ ಬೆಳವಣಿಗೆ ಸಾಧಿಸಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago