ರಾಜ್ಯ

ಇತಿಹಾಸದಲ್ಲೇ ಇದು ಅಪರೂಪದ ಬಜೆಟ್ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share

ಬೆಂಗಳೂರು:ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಟ್‌ನಲ್ಲಿ ಪ್ರತಿಬಿಂಬಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2023 -24ನೇ ಸಾಲಿನ ಬಜೆಟ್‌ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಕಾಂಗ್ರೆಸ್ ಸರಕಾರದ 2023 -24ನೇ ಸಾಲಿನ ಆಯವ್ಯಯ ಇತಿಹಾಸದಲ್ಲೇ ಅತ್ಯಪರೂಪವಾದದ್ದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಣ್ಣಿಸಿದ್ದಾರೆ.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಕಾಂಗ್ರೆಸ್ ಧ್ಯೇಯ ಬಜೆಟ್‌ನಲ್ಲಿ ಪ್ರತಿಬಿಂಬಿತವಾಗಿದೆ. ಪ್ರಾದೇಶಿಕವಾಗಿ ನೋಡಿದರೂ, ಇಲಾಖಾವಾರು ನೋಡಿದರೂ ಎಲ್ಲ ದೃಷ್ಟಿಯಿಂದಲೂ ಬಜೆಟ್ ಅತ್ಯಂತ ಸಮತೋಲಿತವಾಗಿದೆ. ಎಲ್ಲ ಜಿಲ್ಲೆಗಳಿಗೂ, ಎಲ್ಲ ಇಲಾಖೆಗಳಿಗೂ ಹೇರಳವಾಗಿ ಹಣ ಒದಗಿಸಲಾಗಿದೆ.
ರಾಜ್ಯದ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯವಾದ ರೀತಿಯಲ್ಲಿ ಬಜೆಟ್ ರೂಪಿಸಲಾಗಿದೆ. ಕೃಷಿ, ನೀರಾವರಿ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ. ಯಾರಿಗೂ ಅಸಮಾಧಾನವಾಗದಂತೆ, ಎಲ್ಲರಲ್ಲೂ ವಿಶ್ವಾಸ ಮೂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ತಯಾರಿಸಿದ್ದಾರೆ.
ಕಾಂಗ್ರೆಸ್ ನೀಡಿದ ಎಲ್ಲ ಗ್ಯಾರಂಟಿ ಯೋಜನೆಗಳ ಜಾರಿಗೆ ಅತ್ಯಂತ ವ್ಯವಸ್ಥಿತವಾಗಿ, ಯಾವುದೇ ವರ್ಗದವರಿಗೂ ಹೊರೆಯಾಗದ ರೀತಿಯಲ್ಲಿ ಹಣ ಹೊಂದಿಸಲಾಗಿದೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುವ ಸರಕಾರ ಎನ್ನುವುದನ್ನು ಜನಮಾನಸದಲ್ಲಿ ಮೂಡಿಸಲು ಯಶಸ್ವಿಯಾಗಿದ್ದಾರೆ. ಈ ಬಜೆಟ್ ಅನುಷ್ಠಾನದೊಂದಿಗೆ ಮುಂದಿನ 5 ವರ್ಷದಲ್ಲಿ ರಾಜ್ಯ ಅತ್ಯಂತ ವೇಗವಾಗಿ, ಸಮೃದ್ಧವಾಗಿ ಬೆಳವಣಿಗೆ ಸಾಧಿಸಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

1 month ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

1 month ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago