ಬೈಂದೂರು:ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಇಲ್ಲಿನ ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮದ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ,10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ.
ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಒಡೆಯುತ್ತಿರುವುದನ್ನು ನೋಡಿ ಮನೆಯವರು ಕೂಗಿದ ಬಳಿಕ ಕಳ್ಳರು ಪರಾರಿಯಾಗಿದ್ದಾರೆ.ಕೆಲವೇ ದಿನಗಳ ಹಿಂದೆ ಇದೇ ಭಾಗದಲ್ಲಿ ಸಂಜೆ ವೇಳೆ ಸುಮಾರು 35 ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯದ್ದ ಬೆನ್ನಲೇ ಈ ರೀತಿ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಶಿರೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಪ್ರಕರಣ,ಅನಧೀಕೃತ ಚಟುವಟಿಕೆಗಳು ಇಂತಹ ಪ್ರಕರಣಕ್ಕೆ ಇನ್ನಷ್ಟು ದಾರಿ ಮಾಡಿಕೊಡುತ್ತಿದೆ.ಹೀಗಾಗಿ ಆರಕ್ಷಕ ಇಲಾಖೆ ಅನಧೀಕೃತ ಚಟುವಟಿಕೆಗೆ ಕಡಿವಾಣ ಹಾಕುವ ಜೊತೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂಬುವುದು ಸಾರ್ವಜನಿಕರ ಅಭಿಪ್ರಾಯಾವಗಿದೆ.ಬೈಂದೂರು ಆರಕ್ಷರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…