ಬೈಂದೂರು:ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.ಇಲ್ಲಿನ ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮದ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ,10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ.
ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಒಡೆಯುತ್ತಿರುವುದನ್ನು ನೋಡಿ ಮನೆಯವರು ಕೂಗಿದ ಬಳಿಕ ಕಳ್ಳರು ಪರಾರಿಯಾಗಿದ್ದಾರೆ.ಕೆಲವೇ ದಿನಗಳ ಹಿಂದೆ ಇದೇ ಭಾಗದಲ್ಲಿ ಸಂಜೆ ವೇಳೆ ಸುಮಾರು 35 ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯದ್ದ ಬೆನ್ನಲೇ ಈ ರೀತಿ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಶಿರೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಪ್ರಕರಣ,ಅನಧೀಕೃತ ಚಟುವಟಿಕೆಗಳು ಇಂತಹ ಪ್ರಕರಣಕ್ಕೆ ಇನ್ನಷ್ಟು ದಾರಿ ಮಾಡಿಕೊಡುತ್ತಿದೆ.ಹೀಗಾಗಿ ಆರಕ್ಷಕ ಇಲಾಖೆ ಅನಧೀಕೃತ ಚಟುವಟಿಕೆಗೆ ಕಡಿವಾಣ ಹಾಕುವ ಜೊತೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂಬುವುದು ಸಾರ್ವಜನಿಕರ ಅಭಿಪ್ರಾಯಾವಗಿದೆ.ಬೈಂದೂರು ಆರಕ್ಷರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…