ಕುಂದಾಪುರ:ಬೈಂದೂರು ತಾಲೂಕಿನ ಬೀಚ್ ಗಳಲ್ಲಿ ಕೊಡೇರಿ ಗಂಗೆಬೈಲು ಬೀಚ್ ಅದ್ಭುತಗಳಲ್ಲಿ ಒಂದಾಗಿದೆ.ಪ್ರವಾಸಿಗರಿಗೆ ಹೇಳಿ ಮಾಡಿಸಿದ ತಾಣವಾಗಿದ್ದು ಅಲ್ಲಿನ ಸಿವಾಕ್,ಸಮುದ್ರ ಮತ್ತು ಎಡಮಾವಿನ ಹೊಳೆ ನದಿ ಸಂಗಮ,ಸೂರ್ಯಾಸ್ತ ನೋಡುಗರ ಕಣ್ಣಿಗೆ ಹಬ್ಬ ನೀಡುವಂತಿದೆ.ಕೊಡೇರಿ ಬೀಚ್ ನಲ್ಲಿ ಮೂಲ ಸೌಕರ್ಯದ ಕೊರತೆಗಳು ಕಾಡುತ್ತಿದ್ದು, ಪ್ರವಾಸಿಗರ ಹಿತ ದೃಷ್ಟಿಯಿಂದ ಬೀಚ್ ಅನ್ನು ಅಭಿವೃದ್ಧಿಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕೊಡೇರಿ ಗಂಗೆಬೈಲು ಬೀಚ್
ಬೈಂದೂರು ಪಟ್ಟಣದಿಂದ ಸರಿ ಸುಮಾರು 10 ಕಿ.ಮೀ ದೂರದಲ್ಲಿದೆ.ಪ್ರಕೃತಿಯ ರಮಣೀಯ ಸುಂದರ ನೈಸರ್ಗಿಕ ತಾಣವನ್ನು ಅಭಿವೃದ್ಧಿ ಪಡಿಸಿದರೆ,ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬೀಚ್ ನತ್ತಾ ಆಗಮಿಸಲಿದ್ದು,ಸ್ಥಳೀಯವಾಗಿ ವ್ಯಾಪಾರ ವಹಿವಾಟು ಕೂಡ ವೃದ್ಧಿ ಆಗಲಿದೆ.
ಸ್ಥಳೀಯರಾದ ಗಣೇಶ್ ಖಾರ್ವಿ ಅವರು ಮಾತನಾಡಿ,
ಸುಮಾರು ಆರು ವರ್ಷದ ಹಿಂದೆ ಸಿವಾಕ್ ಮೊದಲನೆಯ ಹಂತ ಕಾಮಗಾರಿ ಯೋಜನೆಯಡಿ 200 ಮೀಟರ್ ವರೆಗೆ ಸಂಪೂರ್ಣವಾಗಿ ಮುಗಿದಿದ್ದು ಹಾಗೂ ಇನ್ನೂ 200 ಮೀಟರ್ ಬಾಕಿ ಹಂತ ದಲ್ಲಿದೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಹೇಳಿದರು.
ಮನೋಹರ ಖಾರ್ವಿ ಮಾತನಾಡಿ,
ಇವೊಂದು ಪ್ರವಾಸಿ ತಾಣಕ್ಕೆ ಸರಿಯಾದ ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಇನ್ನೂ ಕೂಡ ಕಾಲ ಕೂಡಿ ಬಂದಿಲ್ಲ.ಹೊಂಡಗುಂಡಿ ಗಳಿಂದ ಕೂಡಿದ ರಸ್ತೆಯಲ್ಲಿ ಸಾಗುವುದೇ ದುಸ್ತರವಾಗಿದೆ,
ಶೌಚಾಲಯ ವ್ಯವಸ್ಥೆ ಸಹಿತ ದಾರಿ ದೀಪದ ವ್ಯವಸ್ಥೆ ಇಲ್ಲ ,ಆಸನದ ವ್ಯವಸ್ಥೆ ಕೂಡ ಇಲ್ಲ ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಗಮನಹರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶ್ರಿ ರಾಮ ಭಜನಾ ಮಂದಿರ ಅಧ್ಯಕ್ಷ ಕೇಶವ ಖಾರ್ವಿ ಹಾಗೂ ಮೀನುಗಾರ ಮುಖಂಡರು ಮತ್ತು ಸ್ಥಳೀಯರು,ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…