ಕುಂದಾಪುರ:ಬೈಂದೂರು ತಾಲೂಕಿನ ಬೀಚ್ ಗಳಲ್ಲಿ ಕೊಡೇರಿ ಗಂಗೆಬೈಲು ಬೀಚ್ ಅದ್ಭುತಗಳಲ್ಲಿ ಒಂದಾಗಿದೆ.ಪ್ರವಾಸಿಗರಿಗೆ ಹೇಳಿ ಮಾಡಿಸಿದ ತಾಣವಾಗಿದ್ದು ಅಲ್ಲಿನ ಸಿವಾಕ್,ಸಮುದ್ರ ಮತ್ತು ಎಡಮಾವಿನ ಹೊಳೆ ನದಿ ಸಂಗಮ,ಸೂರ್ಯಾಸ್ತ ನೋಡುಗರ ಕಣ್ಣಿಗೆ ಹಬ್ಬ ನೀಡುವಂತಿದೆ.ಕೊಡೇರಿ ಬೀಚ್ ನಲ್ಲಿ ಮೂಲ ಸೌಕರ್ಯದ ಕೊರತೆಗಳು ಕಾಡುತ್ತಿದ್ದು, ಪ್ರವಾಸಿಗರ ಹಿತ ದೃಷ್ಟಿಯಿಂದ ಬೀಚ್ ಅನ್ನು ಅಭಿವೃದ್ಧಿಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕೊಡೇರಿ ಗಂಗೆಬೈಲು ಬೀಚ್
ಬೈಂದೂರು ಪಟ್ಟಣದಿಂದ ಸರಿ ಸುಮಾರು 10 ಕಿ.ಮೀ ದೂರದಲ್ಲಿದೆ.ಪ್ರಕೃತಿಯ ರಮಣೀಯ ಸುಂದರ ನೈಸರ್ಗಿಕ ತಾಣವನ್ನು ಅಭಿವೃದ್ಧಿ ಪಡಿಸಿದರೆ,ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬೀಚ್ ನತ್ತಾ ಆಗಮಿಸಲಿದ್ದು,ಸ್ಥಳೀಯವಾಗಿ ವ್ಯಾಪಾರ ವಹಿವಾಟು ಕೂಡ ವೃದ್ಧಿ ಆಗಲಿದೆ.
ಸ್ಥಳೀಯರಾದ ಗಣೇಶ್ ಖಾರ್ವಿ ಅವರು ಮಾತನಾಡಿ,
ಸುಮಾರು ಆರು ವರ್ಷದ ಹಿಂದೆ ಸಿವಾಕ್ ಮೊದಲನೆಯ ಹಂತ ಕಾಮಗಾರಿ ಯೋಜನೆಯಡಿ 200 ಮೀಟರ್ ವರೆಗೆ ಸಂಪೂರ್ಣವಾಗಿ ಮುಗಿದಿದ್ದು ಹಾಗೂ ಇನ್ನೂ 200 ಮೀಟರ್ ಬಾಕಿ ಹಂತ ದಲ್ಲಿದೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಹೇಳಿದರು.
ಮನೋಹರ ಖಾರ್ವಿ ಮಾತನಾಡಿ,
ಇವೊಂದು ಪ್ರವಾಸಿ ತಾಣಕ್ಕೆ ಸರಿಯಾದ ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಇನ್ನೂ ಕೂಡ ಕಾಲ ಕೂಡಿ ಬಂದಿಲ್ಲ.ಹೊಂಡಗುಂಡಿ ಗಳಿಂದ ಕೂಡಿದ ರಸ್ತೆಯಲ್ಲಿ ಸಾಗುವುದೇ ದುಸ್ತರವಾಗಿದೆ,
ಶೌಚಾಲಯ ವ್ಯವಸ್ಥೆ ಸಹಿತ ದಾರಿ ದೀಪದ ವ್ಯವಸ್ಥೆ ಇಲ್ಲ ,ಆಸನದ ವ್ಯವಸ್ಥೆ ಕೂಡ ಇಲ್ಲ ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಗಮನಹರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶ್ರಿ ರಾಮ ಭಜನಾ ಮಂದಿರ ಅಧ್ಯಕ್ಷ ಕೇಶವ ಖಾರ್ವಿ ಹಾಗೂ ಮೀನುಗಾರ ಮುಖಂಡರು ಮತ್ತು ಸ್ಥಳೀಯರು,ಉಪಸ್ಥಿತರಿದ್ದರು.
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…