ಕುಂದಾಪುರ

ಕೊಡೇರಿ ಗಂಗೆಬೈಲು ಬೀಚ್ ಅಭಿವೃದ್ಧಿಗೆ ಆಗ್ರಹ:ಪ್ರವಾಸಿ ತಾಣಕ್ಕೆ ಹೇಳಿ ಮಾಡಿಸಿದ ಜಾಗ

Share

ಕುಂದಾಪುರ:ಬೈಂದೂರು ತಾಲೂಕಿನ ಬೀಚ್ ಗಳಲ್ಲಿ ಕೊಡೇರಿ ಗಂಗೆಬೈಲು ಬೀಚ್ ಅದ್ಭುತಗಳಲ್ಲಿ ಒಂದಾಗಿದೆ.ಪ್ರವಾಸಿಗರಿಗೆ ಹೇಳಿ ಮಾಡಿಸಿದ ತಾಣವಾಗಿದ್ದು ಅಲ್ಲಿನ ಸಿವಾಕ್,ಸಮುದ್ರ ಮತ್ತು ಎಡಮಾವಿನ ಹೊಳೆ ನದಿ ಸಂಗಮ,ಸೂರ್ಯಾಸ್ತ ನೋಡುಗರ ಕಣ್ಣಿಗೆ ಹಬ್ಬ ನೀಡುವಂತಿದೆ.ಕೊಡೇರಿ ಬೀಚ್ ನಲ್ಲಿ ಮೂಲ ಸೌಕರ್ಯದ ಕೊರತೆಗಳು ಕಾಡುತ್ತಿದ್ದು, ಪ್ರವಾಸಿಗರ ಹಿತ ದೃಷ್ಟಿಯಿಂದ ಬೀಚ್ ಅನ್ನು ಅಭಿವೃದ್ಧಿಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೊಡೇರಿ ಗಂಗೆಬೈಲು ಬೀಚ್
ಬೈಂದೂರು ಪಟ್ಟಣದಿಂದ ಸರಿ ಸುಮಾರು 10 ಕಿ.ಮೀ ದೂರದಲ್ಲಿದೆ.ಪ್ರಕೃತಿಯ ರಮಣೀಯ ಸುಂದರ ನೈಸರ್ಗಿಕ ತಾಣವನ್ನು ಅಭಿವೃದ್ಧಿ ಪಡಿಸಿದರೆ,ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬೀಚ್ ನತ್ತಾ ಆಗಮಿಸಲಿದ್ದು,ಸ್ಥಳೀಯವಾಗಿ ವ್ಯಾಪಾರ ವಹಿವಾಟು ಕೂಡ ವೃದ್ಧಿ ಆಗಲಿದೆ.

ಸ್ಥಳೀಯರಾದ ಗಣೇಶ್ ಖಾರ್ವಿ ಅವರು ಮಾತನಾಡಿ,
ಸುಮಾರು ಆರು ವರ್ಷದ ಹಿಂದೆ ಸಿವಾಕ್ ಮೊದಲನೆಯ ಹಂತ ಕಾಮಗಾರಿ ಯೋಜನೆಯಡಿ 200 ಮೀಟರ್ ವರೆಗೆ ಸಂಪೂರ್ಣವಾಗಿ ಮುಗಿದಿದ್ದು ಹಾಗೂ ಇನ್ನೂ 200 ಮೀಟರ್ ಬಾಕಿ ಹಂತ ದಲ್ಲಿದೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಹೇಳಿದರು.

ಮನೋಹರ ಖಾರ್ವಿ ಮಾತನಾಡಿ,
ಇವೊಂದು ಪ್ರವಾಸಿ ತಾಣಕ್ಕೆ ಸರಿಯಾದ ರಸ್ತೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಇನ್ನೂ ಕೂಡ ಕಾಲ ಕೂಡಿ ಬಂದಿಲ್ಲ.ಹೊಂಡಗುಂಡಿ ಗಳಿಂದ ಕೂಡಿದ ರಸ್ತೆಯಲ್ಲಿ ಸಾಗುವುದೇ ದುಸ್ತರವಾಗಿದೆ,
ಶೌಚಾಲಯ ವ್ಯವಸ್ಥೆ ಸಹಿತ ದಾರಿ ದೀಪದ ವ್ಯವಸ್ಥೆ ಇಲ್ಲ ,ಆಸನದ ವ್ಯವಸ್ಥೆ ಕೂಡ ಇಲ್ಲ ಈ ಬಗ್ಗೆ ಪ್ರವಾಸೋದ್ಯಮ ಇಲಾಖೆ ಗಮನಹರಿಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಶ್ರಿ ರಾಮ ಭಜನಾ ಮಂದಿರ ಅಧ್ಯಕ್ಷ ಕೇಶವ ಖಾರ್ವಿ ಹಾಗೂ ಮೀನುಗಾರ ಮುಖಂಡರು ಮತ್ತು ಸ್ಥಳೀಯರು,ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago