ಕುಂದಾಪುರ

ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ- ಡಾ.ಗೋವಿಂದ ಬಾಬು ಪೂಜಾರಿ

Share

Advertisement
Advertisement
Advertisement

Advertisement

ಕುಂದಾಪುರ:ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ.ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಹೇಳಿದರು.
ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆ ಎರಡನೇ ವರ್ಷದ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಗ್ಗಟ್ಟು ಇರುವಲ್ಲಿ ಸಂಘಟನೆಯ ಯಶಸ್ಸು ಸಾಧ್ಯವಾಗುತ್ತದೆ,ಸಮಾಜಮುಖಿ ಕಾರ್ಯಕ್ರಮಗಳು ಸಂಸ್ಥೆಯ ಹೆಸರನ್ನು ಶಾಶ್ವತವಾಗಿಸುತ್ತದೆ ಎಂದರು.
ಜಿ.ಪಂ ಮಾಜಿ ಸದಸ್ಯೆ ಸಾಧು ಬಿಲ್ಲವ,ನಿವೃತ್ತ ವಾಯು ಸೇನಾ ಸೈನಿಕ ಮಂಜುನಾಥ ಪೂಜಾರಿ ಕೋಟೇಶ್ವರ,ಮತ್ಸೋದ್ಯಮಿ ಸಂಜೀವ ಬಿಲ್ಲವ ಉಪಸ್ಥಿತರಿದ್ದರು.ಡಾ.ಗೋವಿಂದ ಬಾಉ ಪೂಜಾರಿ ಮತ್ತು ಮಂಜುನಾಥ ಪೂಜಾರಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗೋಪಾಲ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯದರ್ಶಿ ಜಿ.ಆರ್ ಲಕ್ಷ್ಮಣ ಪೂಜಾರಿ ಸ್ವಾಗತಿಸಿದರು.ಗಣೇಶ್ ಪೂಜಾರಿ ವರದಿ ವಾಚಿಸಿದರು.ಉಪನ್ಯಾಸ ನರೇಂದ್ರ ಎಸ್ ಗಂಗೊಳ್ಳಿ ನಿರೂಪಿಸಿದರು.ಆಕಾಶ್ ಪೂಜಾರಿ ವಂದಿಸಿದರು.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago