ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಮರವಂತೆ ಶ್ರೀ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ಈ ಬಾರಿಯ ಕರ್ಕಾಟಕ ಅಮಾವಾಸ್ಯೆ ಜಾತ್ರೆಯು ಜುಲೈ.17 ರಂದು ನಡೆಯಲಿದೆ ಎಂದು ಕೆಲವು ಕ್ಯಾಲೆಂಡರ್ಗಳಲ್ಲಿ ತಪ್ಪಾಗಿ ನಮೂದಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಯಾಗಿತ್ತು.ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ದೇವಳದ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ಎಂ.ನಾಯಕ್,ಮರವಂತೆ ಶ್ರೀವರಾಹ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ನಡೆಯಲಿದೆ,ಭಕ್ತರು ಸಹಕರಿಸಬೇಕೆಂದು ಕೇಳಿಕೊಂಡಿದ್ದಾರೆ.
ರೈತಾಪಿ ವರ್ಗದ ಜನರು ಮಳೆ ದೇವರೆಂದು ಶ್ರೀವರಾಹ ಸ್ವಾಮಿ ದೇವರನ್ನು ಪೂಜಿಸುತ್ತಾರೆ.
ಶ್ರೀ ಮನ್ನಾರಾಯಣನ ದಶ ಅವತಾರಗಳಲ್ಲಿ ಒಂದಾದ ಶ್ರೀವರಾಹ,ವಿಷ್ಣು,ನಾರಸಿಂಹ ಸ್ವರೂಪದಲ್ಲಿ ಉದ್ಭವಿಸಿ ಸೌಪರ್ಣಿಕಾ ನದಿ ಮತ್ತು ಅರಬಿ ಸಮುದ್ರದ ತಟದ ಮಧ್ಯದಲ್ಲಿ ನೆಲೆನಿಂತು ಭಕ್ತರ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಕೆ ಮಾಡುವ ಶ್ರೀ ದೇವರ ಸನ್ನಿಧಾನದಲ್ಲಿ ಕರ್ಕಾಟಕ ಅಮಾವಾಸ್ಯೆ ದಿನದಂದು ವಾರ್ಷಿಕ ಜಾತ್ರೆ ನೆರವೇರುತ್ತದೆ.ಸಹಸ್ರಾರು ಭಕ್ತರು,ರೈತಾಪಿ ವರ್ಗದವರು ಮತ್ತು ಮೀನುಗಾರರು ಹಾಗೂ ನವಜೋಡಿಗಳು ಕ್ಷೇತ್ರಕ್ಕೆ ಆಗಮಿಸಿ ಸಮುದ್ರ ಸ್ನಾನ ಮಾಡಿ,ಸೌಪರ್ಣಿಕಾ ನದಿಯಲ್ಲಿ ತೀರ್ಥ ಸ್ನಾನ ಮಾಡಿ ದೇವರಿಗೆ ಪೂಜೆಯನ್ನು ಸಲ್ಲಿಸುವುದು ವಾಡಿಕೆ ಆಗಿದೆ.ರೈತಾಪಿ ವರ್ಗದ ಜನರು ಮಳೆ ದೇವರೆಂದು ಶ್ರೀವರಾಹ ಸ್ವಾಮಿ ದೇವರನ್ನು ಪೂಜಿಸುತ್ತಾರೆ.
(ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ)
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…