ಕುಂದಾಪುರ

ಮರವಂತೆ:ಶ್ರೀ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ-ಆಗಸ್ಟ್.16 ಕ್ಕೆ

Share

ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಮರವಂತೆ ಶ್ರೀ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ಈ ಬಾರಿಯ ಕರ್ಕಾಟಕ ಅಮಾವಾಸ್ಯೆ ಜಾತ್ರೆಯು ಜುಲೈ.17 ರಂದು ನಡೆಯಲಿದೆ ಎಂದು ಕೆಲವು ಕ್ಯಾಲೆಂಡರ್‍ಗಳಲ್ಲಿ ತಪ್ಪಾಗಿ ನಮೂದಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಯಾಗಿತ್ತು.ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ದೇವಳದ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ಎಂ.ನಾಯಕ್,ಮರವಂತೆ ಶ್ರೀವರಾಹ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ನಡೆಯಲಿದೆ,ಭಕ್ತರು ಸಹಕರಿಸಬೇಕೆಂದು ಕೇಳಿಕೊಂಡಿದ್ದಾರೆ.

ರೈತಾಪಿ ವರ್ಗದ ಜನರು ಮಳೆ ದೇವರೆಂದು ಶ್ರೀವರಾಹ ಸ್ವಾಮಿ ದೇವರನ್ನು ಪೂಜಿಸುತ್ತಾರೆ.

ಶ್ರೀ ಮನ್ನಾರಾಯಣನ ದಶ ಅವತಾರಗಳಲ್ಲಿ ಒಂದಾದ ಶ್ರೀವರಾಹ,ವಿಷ್ಣು,ನಾರಸಿಂಹ ಸ್ವರೂಪದಲ್ಲಿ ಉದ್ಭವಿಸಿ ಸೌಪರ್ಣಿಕಾ ನದಿ ಮತ್ತು ಅರಬಿ ಸಮುದ್ರದ ತಟದ ಮಧ್ಯದಲ್ಲಿ ನೆಲೆನಿಂತು ಭಕ್ತರ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಕೆ ಮಾಡುವ ಶ್ರೀ ದೇವರ ಸನ್ನಿಧಾನದಲ್ಲಿ ಕರ್ಕಾಟಕ ಅಮಾವಾಸ್ಯೆ ದಿನದಂದು ವಾರ್ಷಿಕ ಜಾತ್ರೆ ನೆರವೇರುತ್ತದೆ.ಸಹಸ್ರಾರು ಭಕ್ತರು,ರೈತಾಪಿ ವರ್ಗದವರು ಮತ್ತು ಮೀನುಗಾರರು ಹಾಗೂ ನವಜೋಡಿಗಳು ಕ್ಷೇತ್ರಕ್ಕೆ ಆಗಮಿಸಿ ಸಮುದ್ರ ಸ್ನಾನ ಮಾಡಿ,ಸೌಪರ್ಣಿಕಾ ನದಿಯಲ್ಲಿ ತೀರ್ಥ ಸ್ನಾನ ಮಾಡಿ ದೇವರಿಗೆ ಪೂಜೆಯನ್ನು ಸಲ್ಲಿಸುವುದು ವಾಡಿಕೆ ಆಗಿದೆ.ರೈತಾಪಿ ವರ್ಗದ ಜನರು ಮಳೆ ದೇವರೆಂದು ಶ್ರೀವರಾಹ ಸ್ವಾಮಿ ದೇವರನ್ನು ಪೂಜಿಸುತ್ತಾರೆ.
(ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ)

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago