ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಮರವಂತೆ ಶ್ರೀ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ಈ ಬಾರಿಯ ಕರ್ಕಾಟಕ ಅಮಾವಾಸ್ಯೆ ಜಾತ್ರೆಯು ಜುಲೈ.17 ರಂದು ನಡೆಯಲಿದೆ ಎಂದು ಕೆಲವು ಕ್ಯಾಲೆಂಡರ್ಗಳಲ್ಲಿ ತಪ್ಪಾಗಿ ನಮೂದಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಯಾಗಿತ್ತು.ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ದೇವಳದ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ಎಂ.ನಾಯಕ್,ಮರವಂತೆ ಶ್ರೀವರಾಹ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ನಡೆಯಲಿದೆ,ಭಕ್ತರು ಸಹಕರಿಸಬೇಕೆಂದು ಕೇಳಿಕೊಂಡಿದ್ದಾರೆ.
ರೈತಾಪಿ ವರ್ಗದ ಜನರು ಮಳೆ ದೇವರೆಂದು ಶ್ರೀವರಾಹ ಸ್ವಾಮಿ ದೇವರನ್ನು ಪೂಜಿಸುತ್ತಾರೆ.
ಶ್ರೀ ಮನ್ನಾರಾಯಣನ ದಶ ಅವತಾರಗಳಲ್ಲಿ ಒಂದಾದ ಶ್ರೀವರಾಹ,ವಿಷ್ಣು,ನಾರಸಿಂಹ ಸ್ವರೂಪದಲ್ಲಿ ಉದ್ಭವಿಸಿ ಸೌಪರ್ಣಿಕಾ ನದಿ ಮತ್ತು ಅರಬಿ ಸಮುದ್ರದ ತಟದ ಮಧ್ಯದಲ್ಲಿ ನೆಲೆನಿಂತು ಭಕ್ತರ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಕೆ ಮಾಡುವ ಶ್ರೀ ದೇವರ ಸನ್ನಿಧಾನದಲ್ಲಿ ಕರ್ಕಾಟಕ ಅಮಾವಾಸ್ಯೆ ದಿನದಂದು ವಾರ್ಷಿಕ ಜಾತ್ರೆ ನೆರವೇರುತ್ತದೆ.ಸಹಸ್ರಾರು ಭಕ್ತರು,ರೈತಾಪಿ ವರ್ಗದವರು ಮತ್ತು ಮೀನುಗಾರರು ಹಾಗೂ ನವಜೋಡಿಗಳು ಕ್ಷೇತ್ರಕ್ಕೆ ಆಗಮಿಸಿ ಸಮುದ್ರ ಸ್ನಾನ ಮಾಡಿ,ಸೌಪರ್ಣಿಕಾ ನದಿಯಲ್ಲಿ ತೀರ್ಥ ಸ್ನಾನ ಮಾಡಿ ದೇವರಿಗೆ ಪೂಜೆಯನ್ನು ಸಲ್ಲಿಸುವುದು ವಾಡಿಕೆ ಆಗಿದೆ.ರೈತಾಪಿ ವರ್ಗದ ಜನರು ಮಳೆ ದೇವರೆಂದು ಶ್ರೀವರಾಹ ಸ್ವಾಮಿ ದೇವರನ್ನು ಪೂಜಿಸುತ್ತಾರೆ.
(ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ)
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…