ಕುಂದಾಪುರ

ಮರವಂತೆ:ಶ್ರೀ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ-ಆಗಸ್ಟ್.16 ಕ್ಕೆ

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisement

ಮರವಂತೆ ಶ್ರೀ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ಈ ಬಾರಿಯ ಕರ್ಕಾಟಕ ಅಮಾವಾಸ್ಯೆ ಜಾತ್ರೆಯು ಜುಲೈ.17 ರಂದು ನಡೆಯಲಿದೆ ಎಂದು ಕೆಲವು ಕ್ಯಾಲೆಂಡರ್‍ಗಳಲ್ಲಿ ತಪ್ಪಾಗಿ ನಮೂದಾಗಿರುವುದರಿಂದ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಯಾಗಿತ್ತು.ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ದೇವಳದ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ಎಂ.ನಾಯಕ್,ಮರವಂತೆ ಶ್ರೀವರಾಹ ದೇವಸ್ಥಾನದಲ್ಲಿ ವಾರ್ಷಿಕವಾಗಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ನಡೆಯಲಿದೆ,ಭಕ್ತರು ಸಹಕರಿಸಬೇಕೆಂದು ಕೇಳಿಕೊಂಡಿದ್ದಾರೆ.

ರೈತಾಪಿ ವರ್ಗದ ಜನರು ಮಳೆ ದೇವರೆಂದು ಶ್ರೀವರಾಹ ಸ್ವಾಮಿ ದೇವರನ್ನು ಪೂಜಿಸುತ್ತಾರೆ.

ಶ್ರೀ ಮನ್ನಾರಾಯಣನ ದಶ ಅವತಾರಗಳಲ್ಲಿ ಒಂದಾದ ಶ್ರೀವರಾಹ,ವಿಷ್ಣು,ನಾರಸಿಂಹ ಸ್ವರೂಪದಲ್ಲಿ ಉದ್ಭವಿಸಿ ಸೌಪರ್ಣಿಕಾ ನದಿ ಮತ್ತು ಅರಬಿ ಸಮುದ್ರದ ತಟದ ಮಧ್ಯದಲ್ಲಿ ನೆಲೆನಿಂತು ಭಕ್ತರ ಇಷ್ಟಾರ್ಥ ಸಿದ್ಧಿಗಳನ್ನು ಈಡೇರಿಕೆ ಮಾಡುವ ಶ್ರೀ ದೇವರ ಸನ್ನಿಧಾನದಲ್ಲಿ ಕರ್ಕಾಟಕ ಅಮಾವಾಸ್ಯೆ ದಿನದಂದು ವಾರ್ಷಿಕ ಜಾತ್ರೆ ನೆರವೇರುತ್ತದೆ.ಸಹಸ್ರಾರು ಭಕ್ತರು,ರೈತಾಪಿ ವರ್ಗದವರು ಮತ್ತು ಮೀನುಗಾರರು ಹಾಗೂ ನವಜೋಡಿಗಳು ಕ್ಷೇತ್ರಕ್ಕೆ ಆಗಮಿಸಿ ಸಮುದ್ರ ಸ್ನಾನ ಮಾಡಿ,ಸೌಪರ್ಣಿಕಾ ನದಿಯಲ್ಲಿ ತೀರ್ಥ ಸ್ನಾನ ಮಾಡಿ ದೇವರಿಗೆ ಪೂಜೆಯನ್ನು ಸಲ್ಲಿಸುವುದು ವಾಡಿಕೆ ಆಗಿದೆ.ರೈತಾಪಿ ವರ್ಗದ ಜನರು ಮಳೆ ದೇವರೆಂದು ಶ್ರೀವರಾಹ ಸ್ವಾಮಿ ದೇವರನ್ನು ಪೂಜಿಸುತ್ತಾರೆ.
(ಮರವಂತೆ ಮಹಾರಾಜ ಸ್ವಾಮಿ,ಶ್ರೀ ವರಾಹ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಆಗಸ್ಟ್.16 ರಂದು ಸಂಪ್ರದಾಯ ಬದ್ಧವಾಗಿ ನಡೆಯಲಿದೆ)

Advertisement
Advertisement

Share
Team Kundapur Times

Recent Posts

ಬ್ಯಾಗ್ ಮರಳಿಸುವಂತೆ ಮನವಿ

ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…

1 week ago

ಕುಂದಾಪುರ\ತೀರ್ಥಹಳ್ಳಿ:ಸ್ಕೂಟಿಗೆ ಬಸ್ ಡಿಕ್ಕಿ,ವ್ಯಕ್ತಿ ಸಾವು

ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…

2 weeks ago

ಆಲಸ್ಯಕರ ಜೀವನ ಪದ್ಧತಿಯಿಂದ ಹಣದುಬ್ಬರ ಏರಿಕೆ, ದುಡಿಯುವ ಕೈಗಳಿಂದ ಅಭಿವೃದ್ಧಿ:ಡಾ. ಹೆಚ್.ಎಸ್.ಶೆಟ್ಟಿ

ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…

2 weeks ago

ಫಿಯರ್ಲೆಸ್ ಸೆಕ್ಯೂರಿಟಿ ಸಿಸ್ಟಮ್ ಕುಂದಾಪುರದಲ್ಲಿ ಶುಭಾರಂಭ

ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…

3 weeks ago

ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಉದಯ ಜೋಗಿ ಹೃದಯಘಾತದಿಂದ ನಿಧನ

ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್‌ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…

4 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ತಂತ್ರಜ್ಞಾನ ಮಾಹಿತಿ ಕಾರ್ಯಗಾರ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…

4 weeks ago