ಮರವಂತೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ರಚನೆ

Share

ಬೈಂದೂರು:ಮರವಂತೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಮೊಬೈಲ್ ತಂತ್ರಜ್ಞಾನ ಬಳಸಿ ವಿದ್ಯಾರ್ಥಿ ಸಂಸತ್ ರಚನೆಗಾಗಿ ಚುನಾವಣೆ ಮತ್ತು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು.
ಚುನಾವಣೆ ಪ್ರಕ್ರಿಯೆಲ್ಲಿ ಅತಿ ಹೆಚ್ಚು ಮತವನ್ನು ಪಡೆದ 10ನೇ ತರಗತಿ ವಿದ್ಯಾರ್ಥಿಗಳಾದ ಪ್ರೀತಮ್ ನಾಯಕನಾಗಿ ಹಾಗೂ ಸಾಕ್ಷಿತ ನಾಯಕಿಯಾಗಿ ಆಯ್ಕೆಯಾದರು.9ನೇ ತರಗತಿ ವಿದ್ಯಾರ್ಥಿ ಸಂದರ್ಶ ಉಪನಾಯಕನಾಗಿ ಹಾಗೂ 10ನೇ ತರಗತಿ ವಿದ್ಯಾರ್ಥಿನಿ ರಾಜಶ್ರೀ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾದರು.ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ರವಿ ನಾಯ್ಕ್ ಪ್ರತಿಜ್ಞಾ ವಿಧಿ ಬೋಧಿಸಿದರು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ರವಿ ಮಡಿವಾಳ,ಮಾಜಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಆರ್.ಕೆ,ಮುಖ್ಯ ಶಿಕ್ಷಕ ಸರ್ವೋತ್ತಮ ಭಟ್,ಶಿಕ್ಷಕವೃಂದವರು ಉಪಸ್ಥಿತರಿದ್ದರು.ದೈಹಿಕ ಶಿಕ್ಷಕ ರಮಾನಾಥ್ ಸ್ವಾಗತಿಸಿದರು.ಶಿಕ್ಷಕ ಹಿತೇಶ್ ಶೆಟ್ಟಿ ನಿರೂಪಿಸಿದರು.ಶಿಕ್ಷಕ ಶ್ರೀಧರ ವಂದಿಸಿದರು.

Advertisement

Share

Leave a comment

Your email address will not be published. Required fields are marked *

You cannot copy content of this page