ಬೈಂದೂರು:ಮರವಂತೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆಯಲ್ಲಿ ಮೊಬೈಲ್ ತಂತ್ರಜ್ಞಾನ ಬಳಸಿ ವಿದ್ಯಾರ್ಥಿ ಸಂಸತ್ ರಚನೆಗಾಗಿ ಚುನಾವಣೆ ಮತ್ತು ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು.
ಚುನಾವಣೆ ಪ್ರಕ್ರಿಯೆಲ್ಲಿ ಅತಿ ಹೆಚ್ಚು ಮತವನ್ನು ಪಡೆದ 10ನೇ ತರಗತಿ ವಿದ್ಯಾರ್ಥಿಗಳಾದ ಪ್ರೀತಮ್ ನಾಯಕನಾಗಿ ಹಾಗೂ ಸಾಕ್ಷಿತ ನಾಯಕಿಯಾಗಿ ಆಯ್ಕೆಯಾದರು.9ನೇ ತರಗತಿ ವಿದ್ಯಾರ್ಥಿ ಸಂದರ್ಶ ಉಪನಾಯಕನಾಗಿ ಹಾಗೂ 10ನೇ ತರಗತಿ ವಿದ್ಯಾರ್ಥಿನಿ ರಾಜಶ್ರೀ ವಿರೋಧ ಪಕ್ಷದ ನಾಯಕಿಯಾಗಿ ಆಯ್ಕೆಯಾದರು.ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ರವಿ ನಾಯ್ಕ್ ಪ್ರತಿಜ್ಞಾ ವಿಧಿ ಬೋಧಿಸಿದರು.ಶಾಲಾ ಎಸ್ಡಿಎಂಸಿ ಅಧ್ಯಕ್ಷ ರವಿ ಮಡಿವಾಳ,ಮಾಜಿ ಗ್ರಾ.ಪಂ ಅಧ್ಯಕ್ಷೆ ಅನಿತಾ ಆರ್.ಕೆ,ಮುಖ್ಯ ಶಿಕ್ಷಕ ಸರ್ವೋತ್ತಮ ಭಟ್,ಶಿಕ್ಷಕವೃಂದವರು ಉಪಸ್ಥಿತರಿದ್ದರು.ದೈಹಿಕ ಶಿಕ್ಷಕ ರಮಾನಾಥ್ ಸ್ವಾಗತಿಸಿದರು.ಶಿಕ್ಷಕ ಹಿತೇಶ್ ಶೆಟ್ಟಿ ನಿರೂಪಿಸಿದರು.ಶಿಕ್ಷಕ ಶ್ರೀಧರ ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…