ಕುಂದಾಪುರ:ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ (ತಿಮಿಂಗಿಲದ ವಾಂತಿ) ಎಂದು ಹೇಳಿ 10.ಲಕ್ಷ.ರೂಗೆ ಸಾರ್ವಜನಿಕರಿಗೆ ಮಾರಲು ಯತ್ನಿಸಿದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾದ ನಿರಂಜನ್ ಎಸ್ (26),ಮಿಲನ್ ಮೊನಿಶ್ ಶೆಟ್ಟಿ (27) ಎನ್ನುವ ಯುವಕರಿಬ್ಬರು ಯಡ್ತರೆ ಹೊಸ ಬಸ್ ನಿಲ್ದಾಣದ ಬಳಿ ಸುಮಾರು 3 ಕೆ.ಜಿ 910.ಗ್ರಾಂ ತೂಕವನ್ನು ಹೊಂದಿರುವ ಹಳದಿ ಬಣ್ಣವನ್ನು ಹೊಲುವ ಮೇಣದಂತಹ ವಸ್ತುವನ್ನು ತಿಮಿಂಗಿಲದ ಅಂಬರ್ ಗ್ರಿಸ್ಎಂದು ಸುಳ್ಳು ಹೇಳಿ ಮಾರಲು ಯತ್ನಿಸುತ್ತಿದ್ದಾಗ ಕ್ಲಪ್ತ ಮಾಹಿತಿ ಮೆರೆಗೆ ದಾಳಿ ನಡೆಸಿದ ಬೈಂದೂರು ಠಾಣೆ ಪೊಲೀಸರು ವಸ್ತು ಸಹಿತ ಯುವಕರನ್ನು ಬಂಧಿಸಿದ್ದಾರೆ.ಈ ರೀತಿ ಸುಳ್ಳುಗಳನ್ನು ಹೇಳಿ ಮಾರಾಟ ಮಾಡುವ ಜಾಲವೊಂದು ಸಕ್ರೀಯವಾಗಿದ್ದು,ಸಾರ್ವಜನಿಕರಿಗೆ ಈ ಬಗ್ಗೆ ಮಾಹಿತಿಗಳು ಲಭ್ಯವಾದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಕೋರಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…