ಹಾಲಾಡಿ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಕುಂದುಕೊರತೆಗಳ ಸಭೆ

Share

Advertisement
Advertisement

ಕುಂದಾಪುರ:ಹಾಲಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಾಲಾಡಿ, ಮೊಳಹಳ್ಳಿ,ಹಾರ್ದಳ್ಳಿ- ಮಂಡಳ್ಳಿ,ಹೊಂಬಾಡಿ-ಮಂಡಾಡಿ,ಹೆಂಗವಳ್ಳಿ ಅಮಾಸೆಬೈಲ್ ಪಂಚಾಯತ್ ಗಳಿಗೆ ಸಂಭಂದಿಸಿದಂತೆ ಕುಂದುಕೊರತೆ ಸಭೆ ಹಾಲಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.

Advertisement

ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಎಚ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.15ನೇ ಹಣಕಾಸು,ನರೇಗಾ,ಜೆಎಂಜೆ ಸೇರಿದಂತೆ ವಿವಿಧ ಇಲಾಖೆಗಳ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರಿಗೆ ತಮ್ಮ ಇಲಾಖೆಯಡಿ ದೊರಕುವ ಸವಲತ್ತುಗಳ ಕುರಿತು ಮಾಹಿತಿ ನೀಡಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.ಹಾಗೂ ಅಮೃತ ಗ್ರಾಮ ಅಭಿಯಾನದಡಿ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಉಡುಪಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಕುಂದಾಪುರ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ, ಜಿ.ಪಂ ಸಹಾಯಕ ನಿರ್ದೇಶಕರಾದ ಕೆ.ಜಿ ರಾಮ್ ದಾಸ್,ಎಡಿಪಿಸಿ ವಿಜಯ್ ಶ್ಯಾಮ್,ತಾ.ಪಂ ಮ್ಯಾನೇಜರ್ ರಾಮಚಂದ್ರ ಮಯ್ಯ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

Advertisement
Advertisement


Share

Leave a comment

Your email address will not be published. Required fields are marked *

You cannot copy content of this page