ಕುಂದಾಪುರ

ಕೊಲ್ಲೂರಿಗೆ ಸರಕಾರಿ ಬಸ್ ಕಲ್ಪಿಸುವಂತೆ ಬೃಹತ್ ಪ್ರತಿಭಟನೆ

Share

Advertisement
Advertisement
Advertisement

ಕುಂದಾಪುರ:ಕೊಲ್ಲೂರು -ಬೈಂದೂರು,ಕೊಲ್ಲೂರು -ಕುಂದಾಪುರ-ನಿಟ್ಟೂರಿಗೆ ಸ‌ರಕಾರಿ ಬಸ್ ಕಲ್ಪಿಸುವಂತೆ ಆಗ್ರಹಿಸಿ ಕೊಲ್ಲೂರು ಗ್ರಾಮ ಪಂಚಾಯಿತ್ ಎದುರು ಸ್ಥಳೀಯರು ಬೃಹತ್ ಪ್ರತಿಭಟನೆಯನ್ನು ನಡೆಸಿ ಮನವಿಯನ್ನು ನೀಡಿದರು.

Advertisement

ಕಾರ್ಮಿಕ ಮುಖಂಡ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಗ್ರಾಮೀಣ ಪ್ರದೇಶವಾದ
ಕೊಲ್ಲೂರು ಪ್ರೇಕ್ಷಣೀಯ ಸ್ಥಳವಾಗಿದೆ ರಾಜ್ಯದ ಮೂಲೆ ಮೂಲೆಗಳಿಂದ ದಿನಂಪ್ರತಿ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ ಆದರೆ ಕೊಲ್ಲೂರಿಗೆ ಸರ್ಕಾರಿ ಬಸ್ ಸೌಲಭ್ಯ ಇಲ್ಲದೆ,ಇಲ್ಲಿನ ಸ್ಥಳೀಯ ಮತ್ತು ಪ್ರವಾಸಿಗ ಮಹಿಳೆಯರು ಸರ್ಕಾರಿ ಬಸ್ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.
ಖಾಸಗಿ ಎಕ್ಸ್ ಪ್ರೆಸ್ ಬಸ್ಸುಗಳು 2-3 ಕಿಮೀ ದೂರ ಕ್ರಮಿಸುವ ಸ್ಥಳೀಯ ಜನರಿಗೆ ನಿಲ್ಲಿಸದೇ ಇರುವುದು ಸ್ಥಳೀಯರಿಗೆ ತೊಂದರೆಯಾಗುತ್ತಿದೆ.ಆದುದರಿಂದ ಸ್ಥಳೀಯವಾಗಿ ಸರ್ಕಾರಿ ಬಸ್ಸುಗಳನ್ನು ಆರಂಭಿಸಿದರೆ ಕ್ರಷಿಕೂಲಿಕಾರರು, ಕಾರ್ಮಿಕರು,ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಜನವಾದಿ ಮಹಿಳಾ ಸಂಘಟನೆಯ ಸಾವಿತ್ರಿ ಹೆಮ್ಮಾಡಿ ಮಾತನಾಡಿ, ಸ್ಥಳೀಯವಾಗಿ ಬಸ್ಸುಗಳು ಓಡಿಸದೇ ಇರುವುದು ವಿದ್ಯಾರ್ಥಿಗಳಿಗೆ ಬಹಳಷ್ಟು ಸಮಸ್ಯೆಯಾಗಿದೆ.
ಕೊಲ್ಲೂರಿನಂತಹ ಧಾರ್ಮಿಕ ಸ್ಥಳಕ್ಕೆ ಬರಲು ಹರಸಾಹಸ ಹಾಗೂ ಅತೀ ಹೆಚ್ಚು ಹಣ ಖಾಸಗಿ ಬಸ್ಸಿಗೆ ಖರ್ಚು ಮಾಡಬೇಕಾದ ಪರಿಸ್ಥಿತಿಯನ್ನು ಸಾರಿಗೆ ಪ್ರಾಧಿಕಾರ ನಿರ್ಮಾಣ ಮಾಡಿದೆ ಎಂದರು.
ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ ಕೊಲ್ಲೂರಿಗೆ ಸರ್ಕಾರಿ ಬಸ್ ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಕಟ್ಟಡ ಕಾರ್ಮಿಕರ ಸಂಘದ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಪ್ರಾಸ್ತಾವಿಕ ಮಾತನಾಡಿದರು.ರಾಘವೇಂದ್ರ ಅರೆಶಿರೂರು ವಂದಿಸಿದರು.ನರಸಿಂಹ ಆಚಾರ್ ಕೊಲ್ಲೂರು,ಗಣೇಶ್ ತೊಂಡೆಮಕ್ಕಿ,ರಾಮ ಕಂಬದ ಕೋಣೆ,ಶೀಲಾವತಿ ಪಡುಕೋಣೆ,ಸಚಿನ್ ಕೊಲ್ಲೂರು,ಸುಜಾತಾ,ಶಾರದ, ಜ್ಯೋತಿ ಕೊಲ್ಲೂರು,ನಾಗರತ್ನ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಂ ಕ್ರಷ್ಣ ಭಟ್ ಅವರ ಮೂಲಕ ಸಾರಿಗೆ ಪ್ರಾಧಿಕಾರ ಅಧಿಕಾರಿಗೆ ಮನವಿ ನೀಡಲಾಯಿತು.
ಈ ವೇಳೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರುಕ್ಕನ ಗೌಡ ಹಾಜರಿದ್ದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಂ ಕ್ರಷ್ಣ ಭಟ್ ಅವರ ಮೂಲಕ ಸಾರಿಗೆ ಪ್ರಾಧಿಕಾರ ಅಧಿಕಾರಿಗೆ ಮನವಿ ನೀಡಲಾಯಿತು.

Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

7 days ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

7 days ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago