ಕುಂದಾಪುರ:ಕೊಲ್ಲೂರು -ಬೈಂದೂರು,ಕೊಲ್ಲೂರು -ಕುಂದಾಪುರ-ನಿಟ್ಟೂರಿಗೆ ಸರಕಾರಿ ಬಸ್ ಕಲ್ಪಿಸುವಂತೆ ಆಗ್ರಹಿಸಿ ಕೊಲ್ಲೂರು ಗ್ರಾಮ ಪಂಚಾಯಿತ್ ಎದುರು ಸ್ಥಳೀಯರು ಬೃಹತ್ ಪ್ರತಿಭಟನೆಯನ್ನು ನಡೆಸಿ ಮನವಿಯನ್ನು ನೀಡಿದರು.
ಕಾರ್ಮಿಕ ಮುಖಂಡ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಗ್ರಾಮೀಣ ಪ್ರದೇಶವಾದ
ಕೊಲ್ಲೂರು ಪ್ರೇಕ್ಷಣೀಯ ಸ್ಥಳವಾಗಿದೆ ರಾಜ್ಯದ ಮೂಲೆ ಮೂಲೆಗಳಿಂದ ದಿನಂಪ್ರತಿ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ ಆದರೆ ಕೊಲ್ಲೂರಿಗೆ ಸರ್ಕಾರಿ ಬಸ್ ಸೌಲಭ್ಯ ಇಲ್ಲದೆ,ಇಲ್ಲಿನ ಸ್ಥಳೀಯ ಮತ್ತು ಪ್ರವಾಸಿಗ ಮಹಿಳೆಯರು ಸರ್ಕಾರಿ ಬಸ್ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.
ಖಾಸಗಿ ಎಕ್ಸ್ ಪ್ರೆಸ್ ಬಸ್ಸುಗಳು 2-3 ಕಿಮೀ ದೂರ ಕ್ರಮಿಸುವ ಸ್ಥಳೀಯ ಜನರಿಗೆ ನಿಲ್ಲಿಸದೇ ಇರುವುದು ಸ್ಥಳೀಯರಿಗೆ ತೊಂದರೆಯಾಗುತ್ತಿದೆ.ಆದುದರಿಂದ ಸ್ಥಳೀಯವಾಗಿ ಸರ್ಕಾರಿ ಬಸ್ಸುಗಳನ್ನು ಆರಂಭಿಸಿದರೆ ಕ್ರಷಿಕೂಲಿಕಾರರು, ಕಾರ್ಮಿಕರು,ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಜನವಾದಿ ಮಹಿಳಾ ಸಂಘಟನೆಯ ಸಾವಿತ್ರಿ ಹೆಮ್ಮಾಡಿ ಮಾತನಾಡಿ, ಸ್ಥಳೀಯವಾಗಿ ಬಸ್ಸುಗಳು ಓಡಿಸದೇ ಇರುವುದು ವಿದ್ಯಾರ್ಥಿಗಳಿಗೆ ಬಹಳಷ್ಟು ಸಮಸ್ಯೆಯಾಗಿದೆ.
ಕೊಲ್ಲೂರಿನಂತಹ ಧಾರ್ಮಿಕ ಸ್ಥಳಕ್ಕೆ ಬರಲು ಹರಸಾಹಸ ಹಾಗೂ ಅತೀ ಹೆಚ್ಚು ಹಣ ಖಾಸಗಿ ಬಸ್ಸಿಗೆ ಖರ್ಚು ಮಾಡಬೇಕಾದ ಪರಿಸ್ಥಿತಿಯನ್ನು ಸಾರಿಗೆ ಪ್ರಾಧಿಕಾರ ನಿರ್ಮಾಣ ಮಾಡಿದೆ ಎಂದರು.
ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ ಕೊಲ್ಲೂರಿಗೆ ಸರ್ಕಾರಿ ಬಸ್ ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಕಟ್ಟಡ ಕಾರ್ಮಿಕರ ಸಂಘದ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಪ್ರಾಸ್ತಾವಿಕ ಮಾತನಾಡಿದರು.ರಾಘವೇಂದ್ರ ಅರೆಶಿರೂರು ವಂದಿಸಿದರು.ನರಸಿಂಹ ಆಚಾರ್ ಕೊಲ್ಲೂರು,ಗಣೇಶ್ ತೊಂಡೆಮಕ್ಕಿ,ರಾಮ ಕಂಬದ ಕೋಣೆ,ಶೀಲಾವತಿ ಪಡುಕೋಣೆ,ಸಚಿನ್ ಕೊಲ್ಲೂರು,ಸುಜಾತಾ,ಶಾರದ, ಜ್ಯೋತಿ ಕೊಲ್ಲೂರು,ನಾಗರತ್ನ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಂ ಕ್ರಷ್ಣ ಭಟ್ ಅವರ ಮೂಲಕ ಸಾರಿಗೆ ಪ್ರಾಧಿಕಾರ ಅಧಿಕಾರಿಗೆ ಮನವಿ ನೀಡಲಾಯಿತು.
ಈ ವೇಳೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರುಕ್ಕನ ಗೌಡ ಹಾಜರಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಂ ಕ್ರಷ್ಣ ಭಟ್ ಅವರ ಮೂಲಕ ಸಾರಿಗೆ ಪ್ರಾಧಿಕಾರ ಅಧಿಕಾರಿಗೆ ಮನವಿ ನೀಡಲಾಯಿತು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…