ಕುಂದಾಪುರ

ಕೊಲ್ಲೂರಿಗೆ ಸರಕಾರಿ ಬಸ್ ಕಲ್ಪಿಸುವಂತೆ ಬೃಹತ್ ಪ್ರತಿಭಟನೆ

Share

ಕುಂದಾಪುರ:ಕೊಲ್ಲೂರು -ಬೈಂದೂರು,ಕೊಲ್ಲೂರು -ಕುಂದಾಪುರ-ನಿಟ್ಟೂರಿಗೆ ಸ‌ರಕಾರಿ ಬಸ್ ಕಲ್ಪಿಸುವಂತೆ ಆಗ್ರಹಿಸಿ ಕೊಲ್ಲೂರು ಗ್ರಾಮ ಪಂಚಾಯಿತ್ ಎದುರು ಸ್ಥಳೀಯರು ಬೃಹತ್ ಪ್ರತಿಭಟನೆಯನ್ನು ನಡೆಸಿ ಮನವಿಯನ್ನು ನೀಡಿದರು.

ಕಾರ್ಮಿಕ ಮುಖಂಡ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಗ್ರಾಮೀಣ ಪ್ರದೇಶವಾದ
ಕೊಲ್ಲೂರು ಪ್ರೇಕ್ಷಣೀಯ ಸ್ಥಳವಾಗಿದೆ ರಾಜ್ಯದ ಮೂಲೆ ಮೂಲೆಗಳಿಂದ ದಿನಂಪ್ರತಿ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ ಆದರೆ ಕೊಲ್ಲೂರಿಗೆ ಸರ್ಕಾರಿ ಬಸ್ ಸೌಲಭ್ಯ ಇಲ್ಲದೆ,ಇಲ್ಲಿನ ಸ್ಥಳೀಯ ಮತ್ತು ಪ್ರವಾಸಿಗ ಮಹಿಳೆಯರು ಸರ್ಕಾರಿ ಬಸ್ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ.
ಖಾಸಗಿ ಎಕ್ಸ್ ಪ್ರೆಸ್ ಬಸ್ಸುಗಳು 2-3 ಕಿಮೀ ದೂರ ಕ್ರಮಿಸುವ ಸ್ಥಳೀಯ ಜನರಿಗೆ ನಿಲ್ಲಿಸದೇ ಇರುವುದು ಸ್ಥಳೀಯರಿಗೆ ತೊಂದರೆಯಾಗುತ್ತಿದೆ.ಆದುದರಿಂದ ಸ್ಥಳೀಯವಾಗಿ ಸರ್ಕಾರಿ ಬಸ್ಸುಗಳನ್ನು ಆರಂಭಿಸಿದರೆ ಕ್ರಷಿಕೂಲಿಕಾರರು, ಕಾರ್ಮಿಕರು,ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಜನವಾದಿ ಮಹಿಳಾ ಸಂಘಟನೆಯ ಸಾವಿತ್ರಿ ಹೆಮ್ಮಾಡಿ ಮಾತನಾಡಿ, ಸ್ಥಳೀಯವಾಗಿ ಬಸ್ಸುಗಳು ಓಡಿಸದೇ ಇರುವುದು ವಿದ್ಯಾರ್ಥಿಗಳಿಗೆ ಬಹಳಷ್ಟು ಸಮಸ್ಯೆಯಾಗಿದೆ.
ಕೊಲ್ಲೂರಿನಂತಹ ಧಾರ್ಮಿಕ ಸ್ಥಳಕ್ಕೆ ಬರಲು ಹರಸಾಹಸ ಹಾಗೂ ಅತೀ ಹೆಚ್ಚು ಹಣ ಖಾಸಗಿ ಬಸ್ಸಿಗೆ ಖರ್ಚು ಮಾಡಬೇಕಾದ ಪರಿಸ್ಥಿತಿಯನ್ನು ಸಾರಿಗೆ ಪ್ರಾಧಿಕಾರ ನಿರ್ಮಾಣ ಮಾಡಿದೆ ಎಂದರು.
ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ಮಾತನಾಡಿ ಕೊಲ್ಲೂರಿಗೆ ಸರ್ಕಾರಿ ಬಸ್ ಓಡಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಕಟ್ಟಡ ಕಾರ್ಮಿಕರ ಸಂಘದ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಪ್ರಾಸ್ತಾವಿಕ ಮಾತನಾಡಿದರು.ರಾಘವೇಂದ್ರ ಅರೆಶಿರೂರು ವಂದಿಸಿದರು.ನರಸಿಂಹ ಆಚಾರ್ ಕೊಲ್ಲೂರು,ಗಣೇಶ್ ತೊಂಡೆಮಕ್ಕಿ,ರಾಮ ಕಂಬದ ಕೋಣೆ,ಶೀಲಾವತಿ ಪಡುಕೋಣೆ,ಸಚಿನ್ ಕೊಲ್ಲೂರು,ಸುಜಾತಾ,ಶಾರದ, ಜ್ಯೋತಿ ಕೊಲ್ಲೂರು,ನಾಗರತ್ನ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಂ ಕ್ರಷ್ಣ ಭಟ್ ಅವರ ಮೂಲಕ ಸಾರಿಗೆ ಪ್ರಾಧಿಕಾರ ಅಧಿಕಾರಿಗೆ ಮನವಿ ನೀಡಲಾಯಿತು.
ಈ ವೇಳೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರುಕ್ಕನ ಗೌಡ ಹಾಜರಿದ್ದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಶಿವರಾಂ ಕ್ರಷ್ಣ ಭಟ್ ಅವರ ಮೂಲಕ ಸಾರಿಗೆ ಪ್ರಾಧಿಕಾರ ಅಧಿಕಾರಿಗೆ ಮನವಿ ನೀಡಲಾಯಿತು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago