ಕುಂದಾಪುರ:ಜ್ಞಾನ,ಮೌಲ್ಯ,ಶಿಸ್ತು-ಸಂಯಮದಿಂದ ಕೂಡಿದ ಕುಂದಾಪುರ ಕನ್ನಡ ಭಾಷೆಯು ಜನಪದ ಸೊಗಡಿನಿಂದ ಕೂಡಿದೆ ಜನರ ಜೀವನವು ಕುಂದಗನ್ನಡದೊಂದಿಗೆ ಸಮ್ಮಿಲನ ಗೊಂಡಿದೆ.ಅಬ್ಬಿ ಭಾಷೆ ಮಾತಾಡುಕೆ ಚೆಂದ ಅದನ್ನು ಮರೆತ್ರೆ ನಾವು ನಮ್ಮನ್ನ ಮರೆತಂತೆ ಎಂದು ಪ್ರೋ.ಎಂ ಬಾಲಕೃಷ್ಣ ಶೆಟ್ಟಿ ಹೇಳಿದರು.ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಕುಂದಾಪ್ರ ದಿನಾಚರಣೆ ಕಾರ್ಯಕ್ರಮವನ್ನು ತಿರಿಗೆ ಭತ್ತವನ್ನು ತುಂಬುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿ ಅವರು ಮಾತನಾಡಿದರು.ಹಾದಿ ಮೇಲೆ ಹೋಪರ್ ಹಾಡೆಂದು ಕಾಣ್ಬೇಡಿ.. ಹಾಡಲ್ಲ ನನ್ನ ಒಡಲೂರಿ.. ಎ೦ದು ಭಾಷೆಯ ಸೊಗಸನ್ನು ಜನಪಾದ ಹಾಡಿನ ಮೂಲಕ ವರ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಮಾತನಾಡಿ ಮಕ್ಕಳಿಗೆ ತಮ್ಮ ನೆಲದ ಸಂಸ್ಕೃತಿ ಮೌಲ್ಯ ಅರಿವಾಗಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಹಳ್ಳಿ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಮಕ್ಕಳ ಬದುಕಿಗೆ ಮಾರ್ಗದರ್ಶನವಾಗಬೇಕೆಂದರು.
ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕುಂದಾಪುರ ಕನ್ನಡ ಕೆಂಬುಕ್ ಚೆಂದ,ಮಣ್ಣಿನ ಭಾಷೆಯನ್ನು ಬಳಸುದರ ಮೂಲಕ ಇನ್ನಷ್ಟು ಬೆಳೆಸಬೇಕು.ಭಾಷೆ ನಶಿಸಿ ಹೋದರೆ ಒಂದು ಸಂತತಿ ನಾಶವಾದಂತೆ ಎಂದು ಅಭಿಪ್ರಾಯಪಟ್ಟರು. ಶಾಲೆಯ ಮುಖ್ಯ ಶಿಕ್ಷಕರಾದ ಅಗಸ್ಟಿನ್ ಕೆ. ಎ ಉಪಸ್ಥಿತರಿದ್ದರು.ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.ವಿಶ್ವ ಕುಂದಾಪುರ ಕನ್ನಡ ದಿನದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಪರ್ಣಿಕ ಸ್ವಾಗತಿಸಿದರು ,ಶಾಧನ ದೇವಾಡಿಗ ನಿರೂಪಿಸಿದರು .ಪ್ರಾರ್ಥನ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…