ಕುಂದಾಪುರ

ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಕುಂದಾಪುರ ಕನ್ನಡ ಸಂಭ್ರಮ

Share

Advertisement
Advertisement

ಕುಂದಾಪುರ:ಜ್ಞಾನ,ಮೌಲ್ಯ,ಶಿಸ್ತು-ಸಂಯಮದಿಂದ ಕೂಡಿದ ಕುಂದಾಪುರ ಕನ್ನಡ ಭಾಷೆಯು ಜನಪದ ಸೊಗಡಿನಿಂದ ಕೂಡಿದೆ ಜನರ ಜೀವನವು ಕುಂದಗನ್ನಡದೊಂದಿಗೆ ಸಮ್ಮಿಲನ ಗೊಂಡಿದೆ.ಅಬ್ಬಿ ಭಾಷೆ ಮಾತಾಡುಕೆ ಚೆಂದ ಅದನ್ನು ಮರೆತ್ರೆ ನಾವು ನಮ್ಮನ್ನ ಮರೆತಂತೆ ಎಂದು ಪ್ರೋ.ಎಂ ಬಾಲಕೃಷ್ಣ ಶೆಟ್ಟಿ ಹೇಳಿದರು.ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಕುಂದಾಪ್ರ ದಿನಾಚರಣೆ ಕಾರ್ಯಕ್ರಮವನ್ನು ತಿರಿಗೆ ಭತ್ತವನ್ನು ತುಂಬುವ ಮೂಲಕ ಸಾಂಪ್ರದಾಯಿಕವಾಗಿ ಉದ್ಘಾಟಿಸಿ ಅವರು ಮಾತನಾಡಿದರು.ಹಾದಿ ಮೇಲೆ ಹೋಪರ್ ಹಾಡೆಂದು ಕಾಣ್ಬೇಡಿ.. ಹಾಡಲ್ಲ ನನ್ನ ಒಡಲೂರಿ.. ಎ೦ದು ಭಾಷೆಯ ಸೊಗಸನ್ನು ಜನಪಾದ ಹಾಡಿನ ಮೂಲಕ ವರ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಮಾತನಾಡಿ ಮಕ್ಕಳಿಗೆ ತಮ್ಮ ನೆಲದ ಸಂಸ್ಕೃತಿ ಮೌಲ್ಯ ಅರಿವಾಗಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಹಳ್ಳಿ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳು ಮಕ್ಕಳ ಬದುಕಿಗೆ ಮಾರ್ಗದರ್ಶನವಾಗಬೇಕೆಂದರು.
ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಖಜಾಂಚಿ ಭರತ್ ಶೆಟ್ಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕುಂದಾಪುರ ಕನ್ನಡ ಕೆಂಬುಕ್ ಚೆಂದ,ಮಣ್ಣಿನ ಭಾಷೆಯನ್ನು ಬಳಸುದರ ಮೂಲಕ ಇನ್ನಷ್ಟು ಬೆಳೆಸಬೇಕು.ಭಾಷೆ ನಶಿಸಿ ಹೋದರೆ ಒಂದು ಸಂತತಿ ನಾಶವಾದಂತೆ ಎಂದು ಅಭಿಪ್ರಾಯಪಟ್ಟರು. ಶಾಲೆಯ ಮುಖ್ಯ ಶಿಕ್ಷಕರಾದ ಅಗಸ್ಟಿನ್ ಕೆ. ಎ ಉಪಸ್ಥಿತರಿದ್ದರು.ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.ವಿಶ್ವ ಕುಂದಾಪುರ ಕನ್ನಡ ದಿನದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಪರ್ಣಿಕ ಸ್ವಾಗತಿಸಿದರು ,ಶಾಧನ ದೇವಾಡಿಗ ನಿರೂಪಿಸಿದರು .ಪ್ರಾರ್ಥನ ವಂದಿಸಿದರು.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

16 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

16 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

17 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago