ಕುಂದಾಪುರ

ಹಡಿಲು ಭೂಮಿಗೆ ಮರುಜೀವ,ಗದ್ದೆ ಉಳುಮೆ ಮಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ

Share

ಕುಂದಾಪುರ:ಚಿಕ್ಕ ಹಿಡುವಳಿ,ಕೂಲಿಕಾರರ ಸಮಸ್ಯೆ ಹಾಗೂ ಲಾಭದಾಯಕವಲ್ಲದ ಕಾರಣದಿಂದಾಗಿ ಜನರು ಕೃಷಿಯಿಂದ ವಿಮುಖರಾದ ಕಾರಣ ಸಾವಿರಾರು ಎಕರೆ ಭತ್ತದ ಗದ್ದೆಗಳು ಹಡಿಲು ಬಿದ್ದಿವೆ,ಹಡಿಲು ಭೂಮಿಗೆ ಮರುಜೀವ ನೀಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಹಾಗೂ ಕೃಷಿ ಇಲಾಖೆಗಳ ಮೂಲಕ ಹಡಿಲು ಭೂಮಿಯನ್ನು ಕೃಷಿ ಮಾಡುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಒತ್ತು ನೀಡಿ,ಗ್ರಾಮ ಪಂಚಾಯತ್ ವಾರು ಗುರಿಯನ್ನು ನಿಗದಿಗೊಳಿಸಿ,ಅಧೀನ ಸಿಬ್ಬಂದಿಗಳಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಕಳೆದ ಎರಡು ತಿಂಗಳುಗಳಿಂದ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.
ಈಗಾಗಲೇ 1034 ಎಕ್ರೆ ಭೂಮಿಯನ್ನು ಜಿಲ್ಲೆಯಲ್ಲಿ ಗುರುತಿಸಿ ಸಂಜೀವಿನಿ ಸದಸ್ಯರು ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದು.ಈ ಮೂಲಕ ಸುಸ್ಥಿರ ಅಭಿವೃದ್ಧಿಯ, ಸ್ವಾವಲಂಬನೆ ಹಾಗೂ ಪರಿಸರ ಪೂರಕವಾದ ಮಹತ್ಕಾರ್ಯದಲ್ಲಿ ಉತ್ತೇಜನ ನೀಡಲಾಗುತ್ತಿದೆ.ಹಲವಾರು ಕಡೆ ಈಗಾಗಲೇ ನೇರ ಬಿತ್ತನೆ ಮೂಲಕ ಹಾಗೂ ನಾಟಿಯ ಮೂಲಕ ಬೇಸಾಯ ಆರಂಭವಾಗಿದೆ.

ಕುಂದಾಪುರ ತಾಲೂಕಿನ ಅಂಪಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡಾಳಿಯಲ್ಲಿ 12 ಎಕರೆ ಹಡಿಲು ಭೂಮಿಯಲ್ಲಿ ಭತ್ತದ ಕೃಷಿಯ ನಾಟಿ ಮಾಡುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರು ಖುದ್ದಾಗಿ ಭಾಗವಹಿಸುವ ಮೂಲಕ ಮಾದರಿ ಕೆಲಸದಲ್ಲಿ ತೊಡಗಿ ಕೊಂಡಿದ್ದಾರೆ.

ಕುಂದ ನಾಡು ರೈತ ಉತ್ಪಾದಕ ಸಂಸ್ಥೆ ಹಾಗೂ ಅಂಪಾರು ರೋಟರಿ ಕ್ಲಬ್ ರವರ ಸಹಯೋಗದಲ್ಲಿ ವನಶ್ರೀ ಸಂಜೀವಿನಿ ಒಕ್ಕೂಟದ ನೂರಾರು ಸದಸ್ಯರು ಭತ್ತದ ನಾಟಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.ಭತ್ತದ ನೇಜಿಯ ಕಟ್ಟನ್ನು ಬಿಚ್ಚಿ ವಿತರಿಸುವುದರ ಮೂಲಕ ಸಿಇಒ ರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸ್ಥಳೀಯ ಕೃಷಿಕರನ್ನು ಸನ್ಮಾನಿಸಲಾಯಿತು.
ಕುಂದನಾಡು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಸಂತೋಷ್ ಬಲ್ಲಾಡಿ ಅವರು ರೈತ ಉತ್ಪಾದಕ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಹಡಿಲು ಭೂಮಿ ಕೃಷಿಯ ಕಾರ್ಯದ ಬಗ್ಗೆ ತಿಳಿಸಿದರು.ಸಾಂಪ್ರದಾಯಿಕ ಪದ್ಧತಿಗಳ ಅನಾವರಣ ಮಾಡಲಾಯಿತು.ಮಳೆಯ ನಡುವೆಯೇ ಗದ್ದೆಗೆ ಇಳಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಪ್ರಸನ್ನ ಅವರು ಭಾರಿ ಮಳೆಯ‌ನ್ನು ಲೆಕ್ಕಿಸದೇ ಗದ್ದೆಯಲ್ಲಿ
ಕೋಣಗಳ ಮೂಲಕ ಉಳುಮೆ ಮಾಡಿ,ಭತ್ತದ ನೇಜಿಯನ್ನು ನೆಡುವುದರ ಮೂಲಕ ಹಡಿಲು ಭೂಮಿ ಕೃಷಿಯ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ ನೀಡಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭಾರತಿ,ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರೂಪ, ಕುಂದನಾಡು ರೈತ ಉತ್ಪಾದಕ ಸಂಸ್ಥೆಯ ಕಾರ್ಯದರ್ಶಿ ಉಮೇಶ್ ಶಾನ್ಕಟ್,ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಕುಮಾರ್ ಶೆಟ್ಟಿ ,ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ ಶೆಟ್ಟಿ ,ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರೋಷನಿ ಶೆಟ್ಟಿ,ವಿವಿಧ ಇಲಾಖೆಗಳ ಅಧಿಕಾರಿಗಳು,ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಸದಸ್ಯರು,ರೈತ ಉತ್ಪಾದಕ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

ಬೈಂದೂರು – 70.5 ಎಕರೆ
ಕುಂದಾಪುರ – 186.23 ಎಕ್ರೆ
ಬ್ರಹ್ಮಾವರ – 202.9 ಎಕ್ರೆ
ಉಡುಪಿ – 125 ಎಕ್ರೆ
ಕಾಪು – 139.34 ಎಕ್ರೆ
ಕಾರ್ಕಳ – 225.67 ಎಕ್ರೆ
ಹೆಬ್ರಿ – 84.53 ಎಕ್ರೆ ಸೇರಿ
ಉಡುಪಿ ಜಿಲ್ಲೆಯಲ್ಲಿ ಒಟ್ಟು -‌1034 ಎಕ್ರೆ ಪ್ರದೇಶದಲ್ಲಿ ಹಡಿಲು ಭೂಮಿಗೆ ಮರುಜೀವ ನೀಡಲಾಗಿದೆ.

(ಮಳೆಯ ನಡುವೆಯೇ ಗದ್ದೆಗೆ ಇಳಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಪ್ರಸನ್ನ ಅವರು ಭಾರಿ ಮಳೆಯ‌ನ್ನು ಲೆಕ್ಕಿಸದೇ ಗದ್ದೆಯಲ್ಲಿ
ಕೋಣಗಳ ಮೂಲಕ ಉಳುಮೆ ಮಾಡಿ,ಭತ್ತದ ನೇಜಿಯನ್ನು ನೆಡುವುದರ ಮೂಲಕ ಹಡಿಲು ಭೂಮಿ ಕೃಷಿಯ ಮಾದರಿ ಕಾರ್ಯಕ್ಕೆ ಅರ್ಥಪೂರ್ಣ ಚಾಲನೆ ನೀಡಿದರು)

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

6 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago