ಮಳೆ ಹಾನಿಯಿಂದ ಉಡುಪಿ ಜಿಲ್ಲೆಯಲ್ಲಿ 28 ಕೋಟಿ ನಷ್ಟ:ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Share

Advertisement
Advertisement
Advertisement

ಉಡುಪಿ:ಜಿಲ್ಲೆಯಾದ್ಯಂತ ಮಳೆ‌ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ,ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೊ ಸಂವಾದದಲ್ಲಿ ಸಚಿವರು ಪಾಲ್ಗೊಂಡರು.ಬಳಿಕ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ.ಇನ್ಮುಂದೆ ಇಂಥ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು,ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಾಗುವುದು ಎಂದರು.

Advertisement


Share

Leave a comment

Your email address will not be published. Required fields are marked *

You cannot copy content of this page