ಕುಂದಾಪುರ

ನಾಪತ್ತೆ ಆದ ಶರತ್ ಗಾಗಿ,ಡ್ರೋನ್ ಕ್ಯಾಮೆರಾದ ಮೂಲಕ ಶೋಧ

Share

Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಕೊಲ್ಲೂರು ಅರಶಿನಗುಂಡಿ ಎಂಬಲ್ಲಿ ಜಲಪಾತಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಭಾನುವಾರ ನಾಪತ್ತೆ ಆದ ಭದ್ರಾವತಿ ಮೂಲದ ನಿವಾಸಿ ಶರತ್‍ಗಾಗಿ ಜಲಪಾತದ ಆಸುಪಾಸಿನ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾ ಬಿಟ್ಟು ಹುಡುಕಾಟವನ್ನು ತೀವೃಗೊಳಿಸಲಾಗಿದೆ.
ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದು ಕಣ್ಮರೆಯಾಗಿ ಆರು ದಿನಗಳಾದರು ಶರತ್ (22) ಗುರುತು ಇನ್ನೂ ಪತ್ತೆ ಆಗಿಲ್ಲ.ಮಗನ ಬರುವಿಕೆಗಾಗಿ ಹೆತ್ತವರು ಜಾತಕ ಪಕ್ಷಿ ಅಂತೆ ಕಾದು ಕುಳಿತಿದ್ದು,ಶರತ್ ಬದುಕಿದ್ದಾನೆ ಎನ್ನುವುದು ಪೋಷಕರ ನಂಬಿಕೆ ಆಗಿದೆ.ಶರತ್‍ಗಾಗಿ ಇನ್ನಿಲ್ಲದ ಹುಡುಕಾಟವನ್ನು ಮಾಡಿದ್ದ ಪೊಲೀಸ್ ಇಲಾಖೆ ಶುಕ್ರವಾರ ಜಲಪಾತದ ಆಸುಪಾಸಿನ ಬಳಿ ಡ್ರೋನ್ ಕ್ಯಾಮೆರಾ ಬಿಟ್ಟು ಕಾರ್ಯಾಚರಣೆ ಮಾಡಿದೆ.ಕಡಿದಾದ ಮತ್ತು ಇಳಿಜಾರು ಪ್ರದೇಶವನ್ನು ಹೊಂದಿರುವ ಮೂಕಾಂಬಿಕಾ ಅಭಯಾರಣ್ಯದಂತಹ ಪ್ರದೇಶದಲ್ಲಿ ಕಾರ್ಯಾಚರಣೆ ಮಾಡುವುದು ಸವಾಲಿನ ಸಂಗತಿ ಆಗಿದೆ.ಕಾಡಿನಲ್ಲಿರುವ ಇಂಬಳ ಮತ್ತು ಕಾಡು ಪ್ರಾಣಿಗಳ ಭಯ ರಕ್ಷಣಾ ಸಿಬ್ಬಂದಿಗಳನ್ನು ಕಾಡುತ್ತಿದೆ.ಜಲಪಾತ,ಹೊಳೆ,ಡ್ಯಾಮ್‍ಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ.
ಮುಳುಗು ತಜ್ಞ ದಿನೇಶ್ ಖಾರ್ವಿ ಲೈಟ್‍ಹೌಸ್ ಗಂಗೊಳ್ಳಿ ನೇತೃತ್ವದ ಜೀವ ರಕ್ಷಕ ತಂಡ ಶರತ್ ಹುಡುಕಾಟದ ಕಾರ್ಯಾಚರಣೆಯಲ್ಲಿ ಭಾಗಿ ಆಗಿ ಪೊಲೀಸ್ ಇಲಾಖೆಗೆ ಸಾಥ್ ನೀಡಿದ್ದರು.

Advertisement
Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

16 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

16 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago