ಕುಂದಾಪುರ

ನಾಪತ್ತೆ ಆದ ಶರತ್ ಗಾಗಿ,ಡ್ರೋನ್ ಕ್ಯಾಮೆರಾದ ಮೂಲಕ ಶೋಧ

Share

ಕುಂದಾಪುರ:ಬೈಂದೂರು ತಾಲೂಕಿನ ಕೊಲ್ಲೂರು ಅರಶಿನಗುಂಡಿ ಎಂಬಲ್ಲಿ ಜಲಪಾತಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಭಾನುವಾರ ನಾಪತ್ತೆ ಆದ ಭದ್ರಾವತಿ ಮೂಲದ ನಿವಾಸಿ ಶರತ್‍ಗಾಗಿ ಜಲಪಾತದ ಆಸುಪಾಸಿನ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾ ಬಿಟ್ಟು ಹುಡುಕಾಟವನ್ನು ತೀವೃಗೊಳಿಸಲಾಗಿದೆ.
ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದು ಕಣ್ಮರೆಯಾಗಿ ಆರು ದಿನಗಳಾದರು ಶರತ್ (22) ಗುರುತು ಇನ್ನೂ ಪತ್ತೆ ಆಗಿಲ್ಲ.ಮಗನ ಬರುವಿಕೆಗಾಗಿ ಹೆತ್ತವರು ಜಾತಕ ಪಕ್ಷಿ ಅಂತೆ ಕಾದು ಕುಳಿತಿದ್ದು,ಶರತ್ ಬದುಕಿದ್ದಾನೆ ಎನ್ನುವುದು ಪೋಷಕರ ನಂಬಿಕೆ ಆಗಿದೆ.ಶರತ್‍ಗಾಗಿ ಇನ್ನಿಲ್ಲದ ಹುಡುಕಾಟವನ್ನು ಮಾಡಿದ್ದ ಪೊಲೀಸ್ ಇಲಾಖೆ ಶುಕ್ರವಾರ ಜಲಪಾತದ ಆಸುಪಾಸಿನ ಬಳಿ ಡ್ರೋನ್ ಕ್ಯಾಮೆರಾ ಬಿಟ್ಟು ಕಾರ್ಯಾಚರಣೆ ಮಾಡಿದೆ.ಕಡಿದಾದ ಮತ್ತು ಇಳಿಜಾರು ಪ್ರದೇಶವನ್ನು ಹೊಂದಿರುವ ಮೂಕಾಂಬಿಕಾ ಅಭಯಾರಣ್ಯದಂತಹ ಪ್ರದೇಶದಲ್ಲಿ ಕಾರ್ಯಾಚರಣೆ ಮಾಡುವುದು ಸವಾಲಿನ ಸಂಗತಿ ಆಗಿದೆ.ಕಾಡಿನಲ್ಲಿರುವ ಇಂಬಳ ಮತ್ತು ಕಾಡು ಪ್ರಾಣಿಗಳ ಭಯ ರಕ್ಷಣಾ ಸಿಬ್ಬಂದಿಗಳನ್ನು ಕಾಡುತ್ತಿದೆ.ಜಲಪಾತ,ಹೊಳೆ,ಡ್ಯಾಮ್‍ಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ.
ಮುಳುಗು ತಜ್ಞ ದಿನೇಶ್ ಖಾರ್ವಿ ಲೈಟ್‍ಹೌಸ್ ಗಂಗೊಳ್ಳಿ ನೇತೃತ್ವದ ಜೀವ ರಕ್ಷಕ ತಂಡ ಶರತ್ ಹುಡುಕಾಟದ ಕಾರ್ಯಾಚರಣೆಯಲ್ಲಿ ಭಾಗಿ ಆಗಿ ಪೊಲೀಸ್ ಇಲಾಖೆಗೆ ಸಾಥ್ ನೀಡಿದ್ದರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago