ಕುಂದಾಪುರ

ನಾಪತ್ತೆ ಆದ ಶರತ್ ಗಾಗಿ,ಡ್ರೋನ್ ಕ್ಯಾಮೆರಾದ ಮೂಲಕ ಶೋಧ

Share

ಕುಂದಾಪುರ:ಬೈಂದೂರು ತಾಲೂಕಿನ ಕೊಲ್ಲೂರು ಅರಶಿನಗುಂಡಿ ಎಂಬಲ್ಲಿ ಜಲಪಾತಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಭಾನುವಾರ ನಾಪತ್ತೆ ಆದ ಭದ್ರಾವತಿ ಮೂಲದ ನಿವಾಸಿ ಶರತ್‍ಗಾಗಿ ಜಲಪಾತದ ಆಸುಪಾಸಿನ ಪ್ರದೇಶದಲ್ಲಿ ಡ್ರೋನ್ ಕ್ಯಾಮೆರಾ ಬಿಟ್ಟು ಹುಡುಕಾಟವನ್ನು ತೀವೃಗೊಳಿಸಲಾಗಿದೆ.
ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದು ಕಣ್ಮರೆಯಾಗಿ ಆರು ದಿನಗಳಾದರು ಶರತ್ (22) ಗುರುತು ಇನ್ನೂ ಪತ್ತೆ ಆಗಿಲ್ಲ.ಮಗನ ಬರುವಿಕೆಗಾಗಿ ಹೆತ್ತವರು ಜಾತಕ ಪಕ್ಷಿ ಅಂತೆ ಕಾದು ಕುಳಿತಿದ್ದು,ಶರತ್ ಬದುಕಿದ್ದಾನೆ ಎನ್ನುವುದು ಪೋಷಕರ ನಂಬಿಕೆ ಆಗಿದೆ.ಶರತ್‍ಗಾಗಿ ಇನ್ನಿಲ್ಲದ ಹುಡುಕಾಟವನ್ನು ಮಾಡಿದ್ದ ಪೊಲೀಸ್ ಇಲಾಖೆ ಶುಕ್ರವಾರ ಜಲಪಾತದ ಆಸುಪಾಸಿನ ಬಳಿ ಡ್ರೋನ್ ಕ್ಯಾಮೆರಾ ಬಿಟ್ಟು ಕಾರ್ಯಾಚರಣೆ ಮಾಡಿದೆ.ಕಡಿದಾದ ಮತ್ತು ಇಳಿಜಾರು ಪ್ರದೇಶವನ್ನು ಹೊಂದಿರುವ ಮೂಕಾಂಬಿಕಾ ಅಭಯಾರಣ್ಯದಂತಹ ಪ್ರದೇಶದಲ್ಲಿ ಕಾರ್ಯಾಚರಣೆ ಮಾಡುವುದು ಸವಾಲಿನ ಸಂಗತಿ ಆಗಿದೆ.ಕಾಡಿನಲ್ಲಿರುವ ಇಂಬಳ ಮತ್ತು ಕಾಡು ಪ್ರಾಣಿಗಳ ಭಯ ರಕ್ಷಣಾ ಸಿಬ್ಬಂದಿಗಳನ್ನು ಕಾಡುತ್ತಿದೆ.ಜಲಪಾತ,ಹೊಳೆ,ಡ್ಯಾಮ್‍ಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ.
ಮುಳುಗು ತಜ್ಞ ದಿನೇಶ್ ಖಾರ್ವಿ ಲೈಟ್‍ಹೌಸ್ ಗಂಗೊಳ್ಳಿ ನೇತೃತ್ವದ ಜೀವ ರಕ್ಷಕ ತಂಡ ಶರತ್ ಹುಡುಕಾಟದ ಕಾರ್ಯಾಚರಣೆಯಲ್ಲಿ ಭಾಗಿ ಆಗಿ ಪೊಲೀಸ್ ಇಲಾಖೆಗೆ ಸಾಥ್ ನೀಡಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago