ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಬೈಂದೂರು, ಗ್ರಾಮ ಪಂಚಾಯತ್ ಕಿರಿಮಂಜೇಶ್ವರ ಅವರ ಸಂಯುಕ್ತ ಆಶ್ರಯದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ರಾಡಿ ಯಲ್ಲಿ ಪಾಲಾಕ್ಷ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಡಿಲು ಬಿದ್ದ ಭೂಮಿಯನ್ನು ನಾಟಿ ಮಾಡುವ ಮೂಲಕ ಕೃಷಿ ಭೂಮಿಗೆ ಜೀವ ಕಳೆ ತಂದಿದ್ದಾರೆ.
ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್ ಅವರು
ಕರಾವಳಿ ಸಂಪ್ರದಾಯಕ ಶೈಲಿಯ ಹಾಳೆ ಟೋಪಿ ಧರಿಸಿ ಭತ್ತದ ನೇಜಿಯನ್ನು ವಿತರಿಸುವ ಮೂಲಕ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ,ಭಾರತದ ಆರ್ಥಿಕ ವ್ಯವಸ್ಥೆ ಬಲಗೊಳ್ಳಲು ಕೃಷಿ ಮುಖ್ಯವಾಗಿದ್ದು ಇಂದಿನ ಯುವ ಸಮುದಾಯ ಕೃಷಿ ಚಟುವಟಿಕೆ ಸಂಪೂರ್ಣವಾಗಿ ನಿರ್ಲಕ್ಷೀಸಿರುವುದು ಬೇಸರದ ಸಂಗತಿ,ಯುವ ಸಮುದಾಯಕ್ಕೆ ಕೃಷಿ ಮಹತ್ವದ ಬಗ್ಗೆ ಸಾಕಷ್ಟು ಅರಿವು ಮೂಡಿಸಬೇಕಾಗಿದೆ ,ಹಾಗೇಯೆ ಜಿಲ್ಲೆಯಲ್ಲಿ ಸಾಕಷ್ಟು ಭೂಮಿಗಳು ಹಡಿಲು ಬಿಟ್ಟಿದ್ದು ಈ ಭಾರಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಸಂಜೀವಿನಿ ಯೋಜನೆಯಡಿಯಲ್ಲಿ ನೇಮಕಗೊಂಡ ಕೃಷಿ ಸಖಿಯರಿಗೆ ಮುಂಗಾರು ಪ್ರಾರಂಭಕ್ಕೂ ಮೊದಲೆ ಸೂಕ್ತ ತರಬೇತಿ ನೀಡಿ ಹಡಿಲು ಭೂಮಿ ಗುರುತಿಸಿ ಹಡಿಲು ಭೂಮಿಯನ್ನು ಹಸಿರಾಗಿಸುವ ಸಂಕಲ್ಪ ತೊಡಲಾಗಿತ್ತು ಅದರಂತೆ ತಾಲೂಕಿನಾದ್ಯಂತ ಸಂಜೀವಿನಿ ಸಂಘದ ಮಹಿಳೆಯರು ಗುಂಪು ಚಟುವಟಿಕೆಯಾಗಿ ಕೃಷಿಯಲ್ಲಿ ತೊಡಗಿರುವುದು ಸಂತಸ ತಂದಿದೆ ಮುಂದಿನ ದಿನಗಳಲ್ಲಿ ಭಾರತಾಂಬೆಯ ಒಡಲು ಹಚ್ಚ ಹಸಿರಿನಿಂದ ಕಂಗೊಳಿಸಲಿ ಆ ತಾಯಿಯ ಮಕ್ಕಳ ಬದುಕು ಹಸನಾಗಲಿ ಇನ್ನು ಹೆಚ್ಚು ಹೆಚ್ಚು ಸಂಜೀವಿನಿ ಸಂಘದ ಮಹಿಳೆಯರು ಕೃಷಿ ಚಟುವಟಿಕೆಯಲ್ಲಿ ತೊಡಗುವಂತಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗ್ರಾ. ಪಂ. ಉಪಾಧ್ಯಕ್ಷರಾದ ಶ್ರೀ ಶೇಖರ್ ಖಾರ್ವಿ ಮಾತನಾಡಿ ಸಂಜೀವಿನಿ ಸಂಘದ ಮಹಿಳೆಯರು ಒಗ್ಗಟ್ಟಿನಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ವಿಷಯ ಈ ಮಹತ್ಕಾರ್ಯಕ್ಕೆ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸಧಾ ಬೆಂಬಲ ನೀಡುತ್ತದೆ ಎಂದರು.ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಸುಬ್ಬಣ್ಣ ಶೆಟ್ಟಿ , ರಾಜು ದೇವಾಡಿಗ,ಆನಂದ ಎಸ್ ಪೂಜಾರಿ, ಈಶ್ವರ ದೇವಾಡಿಗ,ಮಾಜಿ ಸದಸ್ಯರಾದ ಮಂಜುನಾಥ ದೇವಾಡಿಗ , ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರಾಜೇಶ್ ,ಹಾಗೂ ಗ್ರಾ. ಪಂ ಸಿಬ್ಬಂದ್ಧಿ ವರ್ಗ,ಫಾಲಾಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲಲಿತಾ , ಎನ್ ಆರ್ ಎಲ್ ಎಂ ಸಿಬ್ಬಂದ್ಧಿ ಸವಿತಾ,ಕೃಷಿ ಇಲಾಖೆಯ ಅನುಷಾ, ಮೂಕಾಂಬಿಕಾ ಭತ್ತ ಬೆಳೆಗಾರರ ಸಂಘದ ಸಿಇಓ ಅನಿಲ್ ಉಪಸ್ಥಿತರಿದ್ದರು.ಎಂಬಿಕೆ ನೇತ್ರಾವತಿ ನಿರೂಪಿಸಿ ವಂದಿಸಿದರು.
ಗದ್ದೆಗಿಳಿದ ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್ ಅವರು ಸಾಲು ನಟ್ಟಿಯಲ್ಲಿ ಪಾಲ್ಗೊಂಡರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…