ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಬೈಂದೂರು, ಗ್ರಾಮ ಪಂಚಾಯತ್ ಕಿರಿಮಂಜೇಶ್ವರ ಅವರ ಸಂಯುಕ್ತ ಆಶ್ರಯದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ರಾಡಿ ಯಲ್ಲಿ ಪಾಲಾಕ್ಷ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಡಿಲು ಬಿದ್ದ ಭೂಮಿಯನ್ನು ನಾಟಿ ಮಾಡುವ ಮೂಲಕ ಕೃಷಿ ಭೂಮಿಗೆ ಜೀವ ಕಳೆ ತಂದಿದ್ದಾರೆ.
ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್ ಅವರು
ಕರಾವಳಿ ಸಂಪ್ರದಾಯಕ ಶೈಲಿಯ ಹಾಳೆ ಟೋಪಿ ಧರಿಸಿ ಭತ್ತದ ನೇಜಿಯನ್ನು ವಿತರಿಸುವ ಮೂಲಕ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ,ಭಾರತದ ಆರ್ಥಿಕ ವ್ಯವಸ್ಥೆ ಬಲಗೊಳ್ಳಲು ಕೃಷಿ ಮುಖ್ಯವಾಗಿದ್ದು ಇಂದಿನ ಯುವ ಸಮುದಾಯ ಕೃಷಿ ಚಟುವಟಿಕೆ ಸಂಪೂರ್ಣವಾಗಿ ನಿರ್ಲಕ್ಷೀಸಿರುವುದು ಬೇಸರದ ಸಂಗತಿ,ಯುವ ಸಮುದಾಯಕ್ಕೆ ಕೃಷಿ ಮಹತ್ವದ ಬಗ್ಗೆ ಸಾಕಷ್ಟು ಅರಿವು ಮೂಡಿಸಬೇಕಾಗಿದೆ ,ಹಾಗೇಯೆ ಜಿಲ್ಲೆಯಲ್ಲಿ ಸಾಕಷ್ಟು ಭೂಮಿಗಳು ಹಡಿಲು ಬಿಟ್ಟಿದ್ದು ಈ ಭಾರಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಸಂಜೀವಿನಿ ಯೋಜನೆಯಡಿಯಲ್ಲಿ ನೇಮಕಗೊಂಡ ಕೃಷಿ ಸಖಿಯರಿಗೆ ಮುಂಗಾರು ಪ್ರಾರಂಭಕ್ಕೂ ಮೊದಲೆ ಸೂಕ್ತ ತರಬೇತಿ ನೀಡಿ ಹಡಿಲು ಭೂಮಿ ಗುರುತಿಸಿ ಹಡಿಲು ಭೂಮಿಯನ್ನು ಹಸಿರಾಗಿಸುವ ಸಂಕಲ್ಪ ತೊಡಲಾಗಿತ್ತು ಅದರಂತೆ ತಾಲೂಕಿನಾದ್ಯಂತ ಸಂಜೀವಿನಿ ಸಂಘದ ಮಹಿಳೆಯರು ಗುಂಪು ಚಟುವಟಿಕೆಯಾಗಿ ಕೃಷಿಯಲ್ಲಿ ತೊಡಗಿರುವುದು ಸಂತಸ ತಂದಿದೆ ಮುಂದಿನ ದಿನಗಳಲ್ಲಿ ಭಾರತಾಂಬೆಯ ಒಡಲು ಹಚ್ಚ ಹಸಿರಿನಿಂದ ಕಂಗೊಳಿಸಲಿ ಆ ತಾಯಿಯ ಮಕ್ಕಳ ಬದುಕು ಹಸನಾಗಲಿ ಇನ್ನು ಹೆಚ್ಚು ಹೆಚ್ಚು ಸಂಜೀವಿನಿ ಸಂಘದ ಮಹಿಳೆಯರು ಕೃಷಿ ಚಟುವಟಿಕೆಯಲ್ಲಿ ತೊಡಗುವಂತಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗ್ರಾ. ಪಂ. ಉಪಾಧ್ಯಕ್ಷರಾದ ಶ್ರೀ ಶೇಖರ್ ಖಾರ್ವಿ ಮಾತನಾಡಿ ಸಂಜೀವಿನಿ ಸಂಘದ ಮಹಿಳೆಯರು ಒಗ್ಗಟ್ಟಿನಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ವಿಷಯ ಈ ಮಹತ್ಕಾರ್ಯಕ್ಕೆ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸಧಾ ಬೆಂಬಲ ನೀಡುತ್ತದೆ ಎಂದರು.ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಸುಬ್ಬಣ್ಣ ಶೆಟ್ಟಿ , ರಾಜು ದೇವಾಡಿಗ,ಆನಂದ ಎಸ್ ಪೂಜಾರಿ, ಈಶ್ವರ ದೇವಾಡಿಗ,ಮಾಜಿ ಸದಸ್ಯರಾದ ಮಂಜುನಾಥ ದೇವಾಡಿಗ , ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರಾಜೇಶ್ ,ಹಾಗೂ ಗ್ರಾ. ಪಂ ಸಿಬ್ಬಂದ್ಧಿ ವರ್ಗ,ಫಾಲಾಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲಲಿತಾ , ಎನ್ ಆರ್ ಎಲ್ ಎಂ ಸಿಬ್ಬಂದ್ಧಿ ಸವಿತಾ,ಕೃಷಿ ಇಲಾಖೆಯ ಅನುಷಾ, ಮೂಕಾಂಬಿಕಾ ಭತ್ತ ಬೆಳೆಗಾರರ ಸಂಘದ ಸಿಇಓ ಅನಿಲ್ ಉಪಸ್ಥಿತರಿದ್ದರು.ಎಂಬಿಕೆ ನೇತ್ರಾವತಿ ನಿರೂಪಿಸಿ ವಂದಿಸಿದರು.
ಗದ್ದೆಗಿಳಿದ ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್ ಅವರು ಸಾಲು ನಟ್ಟಿಯಲ್ಲಿ ಪಾಲ್ಗೊಂಡರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…