ಕುಂದಾಪುರ

ಗದ್ದೆಗಿಳಿದು ನಾಟಿ ಮಾಡಿದ ತಾಲೂಕು ಪಂಚಾಯಿತಿ ಇಒ-ಭಾರತಿ ಎನ್

Share

ಕುಂದಾಪುರ:ಜಿಲ್ಲಾ ಪಂಚಾಯತ್ ಉಡುಪಿ ,ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ,ಕೃಷಿ ಇಲಾಖೆ ಉಡುಪಿ ಜಿಲ್ಲೆ,ತಾಲೂಕು ಪಂಚಾಯತ್ ಬೈಂದೂರು, ಗ್ರಾಮ ಪಂಚಾಯತ್ ಕಿರಿಮಂಜೇಶ್ವರ ಅವರ ಸಂಯುಕ್ತ ಆಶ್ರಯದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿತ್ರಾಡಿ ಯಲ್ಲಿ ಪಾಲಾಕ್ಷ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಡಿಲು ಬಿದ್ದ ಭೂಮಿಯನ್ನು ನಾಟಿ ಮಾಡುವ ಮೂಲಕ ಕೃಷಿ ಭೂಮಿಗೆ ಜೀವ ಕಳೆ ತಂದಿದ್ದಾರೆ.
ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್ ಅವರು
ಕರಾವಳಿ ಸಂಪ್ರದಾಯಕ ಶೈಲಿಯ ಹಾಳೆ ಟೋಪಿ ಧರಿಸಿ ಭತ್ತದ ನೇಜಿಯನ್ನು ವಿತರಿಸುವ ಮೂಲಕ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ,ಭಾರತದ ಆರ್ಥಿಕ ವ್ಯವಸ್ಥೆ ಬಲಗೊಳ್ಳಲು ಕೃಷಿ ಮುಖ್ಯವಾಗಿದ್ದು ಇಂದಿನ ಯುವ ಸಮುದಾಯ ಕೃಷಿ ಚಟುವಟಿಕೆ ಸಂಪೂರ್ಣವಾಗಿ ನಿರ್ಲಕ್ಷೀಸಿರುವುದು ಬೇಸರದ ಸಂಗತಿ,ಯುವ ಸಮುದಾಯಕ್ಕೆ ಕೃಷಿ ಮಹತ್ವದ ಬಗ್ಗೆ ಸಾಕಷ್ಟು ಅರಿವು ಮೂಡಿಸಬೇಕಾಗಿದೆ ,ಹಾಗೇಯೆ ಜಿಲ್ಲೆಯಲ್ಲಿ ಸಾಕಷ್ಟು ಭೂಮಿಗಳು ಹಡಿಲು ಬಿಟ್ಟಿದ್ದು ಈ ಭಾರಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಸಂಜೀವಿನಿ ಯೋಜನೆಯಡಿಯಲ್ಲಿ ನೇಮಕಗೊಂಡ ಕೃಷಿ ಸಖಿಯರಿಗೆ ಮುಂಗಾರು ಪ್ರಾರಂಭಕ್ಕೂ ಮೊದಲೆ ಸೂಕ್ತ ತರಬೇತಿ ನೀಡಿ ಹಡಿಲು ಭೂಮಿ ಗುರುತಿಸಿ ಹಡಿಲು ಭೂಮಿಯನ್ನು ಹಸಿರಾಗಿಸುವ ಸಂಕಲ್ಪ ತೊಡಲಾಗಿತ್ತು ಅದರಂತೆ ತಾಲೂಕಿನಾದ್ಯಂತ ಸಂಜೀವಿನಿ ಸಂಘದ ಮಹಿಳೆಯರು ಗುಂಪು ಚಟುವಟಿಕೆಯಾಗಿ ಕೃಷಿಯಲ್ಲಿ ತೊಡಗಿರುವುದು ಸಂತಸ ತಂದಿದೆ ಮುಂದಿನ ದಿನಗಳಲ್ಲಿ ಭಾರತಾಂಬೆಯ ಒಡಲು ಹಚ್ಚ ಹಸಿರಿನಿಂದ ಕಂಗೊಳಿಸಲಿ ಆ ತಾಯಿಯ ಮಕ್ಕಳ ಬದುಕು ಹಸನಾಗಲಿ ಇನ್ನು ಹೆಚ್ಚು ಹೆಚ್ಚು ಸಂಜೀವಿನಿ ಸಂಘದ ಮಹಿಳೆಯರು ಕೃಷಿ ಚಟುವಟಿಕೆಯಲ್ಲಿ ತೊಡಗುವಂತಾಗಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗ್ರಾ. ಪಂ. ಉಪಾಧ್ಯಕ್ಷರಾದ ಶ್ರೀ ಶೇಖರ್ ಖಾರ್ವಿ ಮಾತನಾಡಿ ಸಂಜೀವಿನಿ ಸಂಘದ ಮಹಿಳೆಯರು ಒಗ್ಗಟ್ಟಿನಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ವಿಷಯ ಈ ಮಹತ್ಕಾರ್ಯಕ್ಕೆ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಸಧಾ ಬೆಂಬಲ ನೀಡುತ್ತದೆ ಎಂದರು.ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಸುಬ್ಬಣ್ಣ ಶೆಟ್ಟಿ , ರಾಜು ದೇವಾಡಿಗ,ಆನಂದ ಎಸ್ ಪೂಜಾರಿ, ಈಶ್ವರ ದೇವಾಡಿಗ,ಮಾಜಿ ಸದಸ್ಯರಾದ ಮಂಜುನಾಥ ದೇವಾಡಿಗ , ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ರಾಜೇಶ್ ,ಹಾಗೂ ಗ್ರಾ. ಪಂ ಸಿಬ್ಬಂದ್ಧಿ ವರ್ಗ,ಫಾಲಾಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಲಲಿತಾ , ಎನ್ ಆರ್ ಎಲ್ ಎಂ ಸಿಬ್ಬಂದ್ಧಿ ಸವಿತಾ,ಕೃಷಿ ಇಲಾಖೆಯ ಅನುಷಾ, ಮೂಕಾಂಬಿಕಾ ಭತ್ತ ಬೆಳೆಗಾರರ ಸಂಘದ ಸಿಇಓ ಅನಿಲ್ ಉಪಸ್ಥಿತರಿದ್ದರು.ಎಂಬಿಕೆ ನೇತ್ರಾವತಿ ನಿರೂಪಿಸಿ ವಂದಿಸಿದರು.
ಗದ್ದೆಗಿಳಿದ ಬೈಂದೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಎನ್ ಅವರು ಸಾಲು ನಟ್ಟಿಯಲ್ಲಿ ಪಾಲ್ಗೊಂಡರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago