ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ,ಅಭಿನಂದನಾ ಕಾರ್ಯಕ್ರಮ

Share

Advertisement
Advertisement
Advertisement

ಕುಂದಾಪುರ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ವತಿಯಿಂದ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಕುಂದಾಪುರ ಮೊಗವೀರ ಭವನದಲ್ಲಿ ನಡೆಯಿತು.

ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ,ಪ್ರಿನ್ಸಿಪಾಲ್ ಗಣೇಶ ಮೊಗವೀರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕುಂದಾಪುರ ಆದರ್ಶ ಆಸ್ಪತ್ರೆ ಎಮ್.ಡಿ ಡಾ.ಆದರ್ಶ ಹೆಬ್ಬಾರ್ ಮಾತನಾಡಿ ಶಿಕ್ಷಣ, ಕ್ರೀಡೆ,ಕಲೆ,ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣವಾಗಿದೆ.ವಿದ್ಯಾರ್ಥಿಗಳು ಪೂರ್ವ ತಯಾರಿಯೊಂದಿಗೆ ಪರೀಕ್ಷೆಯನ್ನು ಎದುರಿಸಬೇಕೆಂದು ಶುಭ ಹಾರೈಸಿದರು.ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಬ್ರಹ್ಮಣ್ಯ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರೀಕರಾಗಿ ಹೊರಹೊಮ್ಮುವ ಮೂಲಕ ದೇಶದ ಅರ್ಥ ವ್ಯವಸ್ಥೆಗೆ ಕೊಡುಗೆ ನೀಡಬೇಕು ಎಂದರು.

ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕಿ ಚಿತ್ರಾ ಕಾರಂತ್ ಅವರು ಭವಿಷ್ಯದ ಬಹುಪಯೋಗಿ ವಿವಿಧ ಕೋರ್ಸ್‌ ಗಳ ಕುರಿತು ಮಾಹಿತಿ ನೀಡಿ,ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಗುಣಮಟ್ಟದ ಶಿಕ್ಷಣ ಅತೀ ಮುಖ್ಯ ಎಂದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಫಲಿತಾಂಶ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಲಾಯಿತು‌.
ಈ ಸಂದರ್ಭದಲ್ಲಿ ಪ್ರೌಢಶಾಲೆ ಹೆಮ್ಮಾಡಿ ಮುಖ್ಯ ಶಿಕ್ಷಕ ಮಂಜು ಕಾಳಾವರ,ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ,ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಹಾಗೂ ಕಾರ್ಯದರ್ಶಿ ಸಿಂಚನಾ ಆರ್ ರಾವ್ ,ವಿದ್ಯಾರ್ಥಿ ಪೋಷಕರು,ಕಾಲೇಜಿನ ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದರು.ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಮೊಗವೀರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪನ್ಯಾಸಕ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.ವೈಸ್ ಪ್ರಿನ್ಸಿಪಾಲ್ ರಮೇಶ್ ಪೂಜಾರಿ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page