ಕುಂದಾಪುರ:ಬೈಂದೂರು ತಾಲೂಕಿನ ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕಳೆದ ಭಾನುವಾರ ನಾಪತ್ತೆ ಆಗಿದ್ದ ಭದ್ರಾವತಿ ಮೂಲದ ಶರತ್ (23) ಶವವಾಗಿ ಪತ್ತೆ ಆಗಿದ್ದಾನೆ.
ರಜಾ ಮಜಾವನ್ನು ಅನುಭವಿಸಲು ಸ್ನೇಹಿತರ ಜತೆಗೂಡಿ ಅರಶಿನಗುಂಡಿ ಜಲಪಾತಕ್ಕೆ ಬಂದಿದ್ದ ಶರತ್ ಜಲಪಾತವನ್ನು ನೋಡುತ್ತಾ ನಿಂತ್ತಿದ್ದ ಸಂದರ್ಭ ಕಾಲು ಜಾರಿ ಜಲಪಾತಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.ಶರತ್ ನೀರಿಗೆ ಬೀಳುತ್ತಿರುವ ವಿಡಿಯೋ ಆತನ ಸ್ನೇಹಿತನ ಮೊಬೈಲ್ ಕ್ಯಾಮಾರಾದಲ್ಲಿ ಸೆರೆ ಆಗಿತ್ತು,ಶರತ್ಗಾಗಿ ಕಳೆದ ಒಂದು ವಾರಗಳಿಂದ ಹುಡುಕಾಟ ನಡೆಸಿದ್ದರು ಸುಳಿವು ಮಾತ್ರ ಪತ್ತೆ ಆಗಿರಲಿಲ್ಲ.ಕಳೆದ ಎರಡು ದಿನಗಳಿಂದ ಮಳೆ ತೀವೃತೆ ಕಮ್ಮಿ ಆಗಿದ್ದರಿಂದ ಶರತ್ಗಾಗಿ ಹುಡುಕಾಟಕ್ಕೆ ವೇಗವನ್ನು ನೀಡಲಾಗಿದ್ದು.ಜಲಪಾತದ ಸನಿಹದಲ್ಲೇ ಕಲ್ಲಿನ ಪೊಟರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶರತ್ ಶವ ಪತ್ತೆಯಾಗಿದೆ.
ಜಲಪಾತದಲ್ಲಿ ಬಿದ್ದು ಕಣ್ಮರೆಯಾಗಿದ್ದ ಯುವಕನ ಪತ್ತೆ ಕಾರ್ಯಾಚರಣೆಯಲ್ಲಿ ಸಾಹಸಿ ಚಿತ್ರದುರ್ಗದ ಜ್ಯೋತಿರಾಜ್ ತಂಡ,ಈಶ್ವರ್ ಮಲ್ಪೆ ತಂಡ ಮತ್ತು ಮುಳುಗುತಜ್ಞ ದಿನೇಶ್ ಖಾರ್ವಿ ನೇತೃತ್ವದ ಜೀವರಕ್ಷಕ ತಂಡದ ಸದಸ್ಯರು ಭಾಗಿಯಾಗಿದ್ದರೂ.ಡ್ರೋನ್ ಕ್ಯಾಮಾರಾದ ಮೂಲಕವೂ ಹುಡುಕಾಟ ಮಾಡಲಾಗಿತ್ತು.ಕೊಲ್ಲೂರು ಪಿಎಸ್ಐ ಜಯಶ್ರೀ ಹೊನ್ನೂರು ಹಾಗೂ ಸುಧಾರಾಣಿ ನೇತೃತ್ವದ ತಂಡ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ,ಉಡುಪಿ ಎನ್ಡಿಆರ್ಎಫ್ ತಂಡ,ಕುಂದಾಪುರ ಮತ್ತು ಬೈಂದೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದರು.ಮಗನ ಪತ್ತೆಗಾಗಿ ಶರತ್ ಪೋಷಕರು ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು.ನಾಪತ್ತೆಯಾಗಿದ್ದ ಯುವಕನ ಶವದ ಪತ್ತೆಗಾಗಿ ಡ್ರೋನ್ ಕ್ಯಾಮಾರಾ ಬಳಸಿಕೊಂಡಿರುವುದು ಈ ಭಾಗದಲ್ಲಿ ಇದೆ ಮೊದಲು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…