ಕುಂದಾಪುರ:ಬೈಂದೂರು ತಾಲೂಕಿನ ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕಳೆದ ಭಾನುವಾರ ನಾಪತ್ತೆ ಆಗಿದ್ದ ಭದ್ರಾವತಿ ಮೂಲದ ಶರತ್ (23) ಶವವಾಗಿ ಪತ್ತೆ ಆಗಿದ್ದಾನೆ.
ರಜಾ ಮಜಾವನ್ನು ಅನುಭವಿಸಲು ಸ್ನೇಹಿತರ ಜತೆಗೂಡಿ ಅರಶಿನಗುಂಡಿ ಜಲಪಾತಕ್ಕೆ ಬಂದಿದ್ದ ಶರತ್ ಜಲಪಾತವನ್ನು ನೋಡುತ್ತಾ ನಿಂತ್ತಿದ್ದ ಸಂದರ್ಭ ಕಾಲು ಜಾರಿ ಜಲಪಾತಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.ಶರತ್ ನೀರಿಗೆ ಬೀಳುತ್ತಿರುವ ವಿಡಿಯೋ ಆತನ ಸ್ನೇಹಿತನ ಮೊಬೈಲ್ ಕ್ಯಾಮಾರಾದಲ್ಲಿ ಸೆರೆ ಆಗಿತ್ತು,ಶರತ್ಗಾಗಿ ಕಳೆದ ಒಂದು ವಾರಗಳಿಂದ ಹುಡುಕಾಟ ನಡೆಸಿದ್ದರು ಸುಳಿವು ಮಾತ್ರ ಪತ್ತೆ ಆಗಿರಲಿಲ್ಲ.ಕಳೆದ ಎರಡು ದಿನಗಳಿಂದ ಮಳೆ ತೀವೃತೆ ಕಮ್ಮಿ ಆಗಿದ್ದರಿಂದ ಶರತ್ಗಾಗಿ ಹುಡುಕಾಟಕ್ಕೆ ವೇಗವನ್ನು ನೀಡಲಾಗಿದ್ದು.ಜಲಪಾತದ ಸನಿಹದಲ್ಲೇ ಕಲ್ಲಿನ ಪೊಟರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶರತ್ ಶವ ಪತ್ತೆಯಾಗಿದೆ.
ಜಲಪಾತದಲ್ಲಿ ಬಿದ್ದು ಕಣ್ಮರೆಯಾಗಿದ್ದ ಯುವಕನ ಪತ್ತೆ ಕಾರ್ಯಾಚರಣೆಯಲ್ಲಿ ಸಾಹಸಿ ಚಿತ್ರದುರ್ಗದ ಜ್ಯೋತಿರಾಜ್ ತಂಡ,ಈಶ್ವರ್ ಮಲ್ಪೆ ತಂಡ ಮತ್ತು ಮುಳುಗುತಜ್ಞ ದಿನೇಶ್ ಖಾರ್ವಿ ನೇತೃತ್ವದ ಜೀವರಕ್ಷಕ ತಂಡದ ಸದಸ್ಯರು ಭಾಗಿಯಾಗಿದ್ದರೂ.ಡ್ರೋನ್ ಕ್ಯಾಮಾರಾದ ಮೂಲಕವೂ ಹುಡುಕಾಟ ಮಾಡಲಾಗಿತ್ತು.ಕೊಲ್ಲೂರು ಪಿಎಸ್ಐ ಜಯಶ್ರೀ ಹೊನ್ನೂರು ಹಾಗೂ ಸುಧಾರಾಣಿ ನೇತೃತ್ವದ ತಂಡ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ,ಉಡುಪಿ ಎನ್ಡಿಆರ್ಎಫ್ ತಂಡ,ಕುಂದಾಪುರ ಮತ್ತು ಬೈಂದೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದರು.ಮಗನ ಪತ್ತೆಗಾಗಿ ಶರತ್ ಪೋಷಕರು ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು.ನಾಪತ್ತೆಯಾಗಿದ್ದ ಯುವಕನ ಶವದ ಪತ್ತೆಗಾಗಿ ಡ್ರೋನ್ ಕ್ಯಾಮಾರಾ ಬಳಸಿಕೊಂಡಿರುವುದು ಈ ಭಾಗದಲ್ಲಿ ಇದೆ ಮೊದಲು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…