ಕುಂದಾಪುರ

ಅರಶಿನಗುಂಡಿ ಜಲಪಾತಕ್ಕೆ ಕಾಲು ಜಾರಿ ಬಿದ್ದು ನಾಪತ್ತೆ ಆಗಿದ್ದ ಶರತ್ ಶವವಾಗಿ ಪತ್ತೆ

Share

Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕಳೆದ ಭಾನುವಾರ ನಾಪತ್ತೆ ಆಗಿದ್ದ ಭದ್ರಾವತಿ ಮೂಲದ ಶರತ್ (23) ಶವವಾಗಿ ಪತ್ತೆ ಆಗಿದ್ದಾನೆ.
ರಜಾ ಮಜಾವನ್ನು ಅನುಭವಿಸಲು ಸ್ನೇಹಿತರ ಜತೆಗೂಡಿ ಅರಶಿನಗುಂಡಿ ಜಲಪಾತಕ್ಕೆ ಬಂದಿದ್ದ ಶರತ್ ಜಲಪಾತವನ್ನು ನೋಡುತ್ತಾ ನಿಂತ್ತಿದ್ದ ಸಂದರ್ಭ ಕಾಲು ಜಾರಿ ಜಲಪಾತಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.ಶರತ್ ನೀರಿಗೆ ಬೀಳುತ್ತಿರುವ ವಿಡಿಯೋ ಆತನ ಸ್ನೇಹಿತನ ಮೊಬೈಲ್ ಕ್ಯಾಮಾರಾದಲ್ಲಿ ಸೆರೆ ಆಗಿತ್ತು,ಶರತ್‍ಗಾಗಿ ಕಳೆದ ಒಂದು ವಾರಗಳಿಂದ ಹುಡುಕಾಟ ನಡೆಸಿದ್ದರು ಸುಳಿವು ಮಾತ್ರ ಪತ್ತೆ ಆಗಿರಲಿಲ್ಲ.ಕಳೆದ ಎರಡು ದಿನಗಳಿಂದ ಮಳೆ ತೀವೃತೆ ಕಮ್ಮಿ ಆಗಿದ್ದರಿಂದ ಶರತ್‍ಗಾಗಿ ಹುಡುಕಾಟಕ್ಕೆ ವೇಗವನ್ನು ನೀಡಲಾಗಿದ್ದು.ಜಲಪಾತದ ಸನಿಹದಲ್ಲೇ ಕಲ್ಲಿನ ಪೊಟರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶರತ್ ಶವ ಪತ್ತೆಯಾಗಿದೆ.
ಜಲಪಾತದಲ್ಲಿ ಬಿದ್ದು ಕಣ್ಮರೆಯಾಗಿದ್ದ ಯುವಕನ ಪತ್ತೆ ಕಾರ್ಯಾಚರಣೆಯಲ್ಲಿ ಸಾಹಸಿ ಚಿತ್ರದುರ್ಗದ ಜ್ಯೋತಿರಾಜ್ ತಂಡ,ಈಶ್ವರ್ ಮಲ್ಪೆ ತಂಡ ಮತ್ತು ಮುಳುಗುತಜ್ಞ ದಿನೇಶ್ ಖಾರ್ವಿ ನೇತೃತ್ವದ ಜೀವರಕ್ಷಕ ತಂಡದ ಸದಸ್ಯರು ಭಾಗಿಯಾಗಿದ್ದರೂ.ಡ್ರೋನ್ ಕ್ಯಾಮಾರಾದ ಮೂಲಕವೂ ಹುಡುಕಾಟ ಮಾಡಲಾಗಿತ್ತು.ಕೊಲ್ಲೂರು ಪಿಎಸ್‍ಐ ಜಯಶ್ರೀ ಹೊನ್ನೂರು ಹಾಗೂ ಸುಧಾರಾಣಿ ನೇತೃತ್ವದ ತಂಡ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ,ಉಡುಪಿ ಎನ್‍ಡಿಆರ್‍ಎಫ್ ತಂಡ,ಕುಂದಾಪುರ ಮತ್ತು ಬೈಂದೂರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದರು.ಮಗನ ಪತ್ತೆಗಾಗಿ ಶರತ್ ಪೋಷಕರು ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದರು.ನಾಪತ್ತೆಯಾಗಿದ್ದ ಯುವಕನ ಶವದ ಪತ್ತೆಗಾಗಿ ಡ್ರೋನ್ ಕ್ಯಾಮಾರಾ ಬಳಸಿಕೊಂಡಿರುವುದು ಈ ಭಾಗದಲ್ಲಿ ಇದೆ ಮೊದಲು.

Advertisement
Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

14 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago