ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ-ಬೆಲೆ ಬಾಳುವ ಶ್ರೀಗಂಧದ ತುಂಡುಗಳು ವಶಕ್ಕೆ

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲ ಗ್ರಾಮದ ಕಾರಿಬೈಲು ಎಂಬಲ್ಲಿ ಸುಮಾರು 2.ಲಕ್ಷ.ರೂ ಮೌಲ್ಯದ ಶ್ರೀಗಂಧದ ಮರದ ತಂಡುಗಳನ್ನು ಕ್ಷೀಪ್ರ ಕಾರ್ಯಾಚರಣೆ ಮೂಲಕ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಬೆಳ್ಳಾಲ ಗ್ರಾಮದ ಕಾರಿಬೈಲು ಪರಿಸರದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಅನುಮಾನಾಸ್ಪದ ಪಟ್ಟ ಸ್ಥಳದಲ್ಲಿದ್ದ ಬೆಲೆಬಾಳುವ ಒಂದು ಶ್ರೀಗಂಧದ ಮರವನ್ನು ಆರೋಪಿಗಳು ಕಡಿದು ಸಾಗಾಟ ಮಾಡುವ ಹೊತ್ತಿನಲ್ಲಿ ಖಚಿತ ಮಾಹಿತಿ ಮೇರೆಗೆ ಡಿಸಿಎಫ್ ಉದಯ ಎಂ ನಾಯಕ್ ಅವರ ನಿರ್ದೇಶನದಂತೆ,ಎಸಿಎಫ್ ಕ್ಲಿಫರ್ಡ್ ಲೋಬೋ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಕಿರಣ್ ಬಾಬು ಟಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಆನಂದ ಬಳೆಗಾರ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಇವೊಂದು ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಶರತ್ ಗಾಣಿಗ,ಗೀತ ಯಾಸಣ್ಣನವರ್,ಗಸ್ತು ಅರಣ್ಯ ಪಾಲಕ ರಾಘವೇಂದ್ರ,ವಿಜಯ ಕೆ,ಅರಣ್ಯ ವೀಕ್ಷಕ ಉದಯ ಮತ್ತು ವಾಹನ ಚಾಲಕ ಅಶೋಕ ಪಾಲ್ಗೊಂಡಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page